ಮೈಸೂರು

ಟಿಕೆಟ್‌ ನೀಡಿದರೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುತ್ತೇನೆ: ಹಳ್ಳಿ ಹಕ್ಕಿ

ಮೈಸೂರು: ತೀವ್ರ ಕುತೂಹಲಕ್ಕೆ ದಾರಿ ಮಡಿಕೊಟ್ಟಿದ್ದ ಮೈಸೂರು ಲೋಕಸಭಾ ಬಿಜೆಪಿ ಟಿಕೆಟ್‌ ರಾಜವಂಶಸ್ಥ ಯದುವೀರ್‌ ಅವರ ಪಾಲಾದ ನಂತರ ಇದೀಗ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಹುಟುಕಾಟ ಶುರುವಾಗಿದೆ.

ರಾಜರ ವಿರುದ್ಧ ಯಾರನ್ನು ನಿಲ್ಲಿಸಬೇಕೆಂಬುದು ಸದ್ಯ ತಲೆನೋವಾಗಿ ಪರಿಣಮಿಸಿದೆ. ಇದರ ಜೊತೆಗೆ ಕಾಂಗ್ರೆಸ್‌ ನಿಂದ ಟಿಕೆಟ್‌ ನೀಡಿದರೆ ನಾನು ಸ್ಪರ್ಧೆ ಮಾಡುತ್ತೇನೆ ಎಂದು ವಿಧಾನಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಹೇಳಿದ್ದಾರೆ.

ನಾನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ಕಾಂಗ್ರೆಸ್‌ನಿಂದ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದೇನೆ, ಈ ಬಗ್ಗೆ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ‌ ಮಾತನಾಡಿರುವುದಾಗಿ ಅವರು ಹೇಳಿದರು.

ಸಿದ್ದರಾಮಯ್ಯ ನೀವು ಬಿಜೆಪಿಯಲ್ಲಿ ಇದ್ದೀರಾ ಹೇಗೆ ಅಂತಾ ಕೇಳಿದರು. ಅದಕ್ಕೆ ನಾನು ಎಲ್ಲವನ್ನೂ ವಿವರಿಸಿದ್ದೇನೆ. ನಾನು ಟೆಕ್ನಿಕಲಿ ಬಿಜೆಪಿಯಲ್ಲಿದ್ದೇನೆ. ನನಗೆ ಟಿಕೆಟ್ ನೀಡಿದರೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದೇನೆ. ಅದಕ್ಕೆ ಸಿಎಂ ಸಿದ್ದರಾಮಯ್ಯ ನೋಡೋಣ ಅಂತಾ ಹೇಳಿದ್ದಾರೆ.

ನಾನು ಮೈಸೂರು-ಕೊಡಗು ಕ್ಷೇತ್ರದ ಸಂಸದನಾಗಿದ್ದ ವೇಳೆ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು. ಇದೇ ವೇಳೆ ಕಾಂಗ್ರೆಸ್‌ ಟಿಕೆಟ್‌ ನೀಡಿದರೇ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಎಚ್‌. ವಿಶ್ವನಾಥ್‌ ವಿವರಿಸಿದರು.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago