ಮೈಸೂರು

ದಲಿತರು ಬೌದ್ಧ ಧರ್ಮಕ್ಕೆ ಹೋದರೆ ಮತಾಂತರ ಅಲ್ಲ : ಸಚಿವ ಮಹದೇವಪ್ಪ

ಮೈಸೂರು : ದಲಿತರು ಬೌದ್ಧ ಧರ್ಮಕ್ಕೆ ಹೋದರೆ ಅದು ಮತಾಂತರ ಅಲ್ಲ. ಧರ್ಮದ ಬಗ್ಗೆ ಜ್ಞಾನ ಇಲ್ಲದವರು ಅದನ್ನು ಮತಾಂತರ ಅನ್ನುತ್ತಾರೆ ಅಷ್ಟೇ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಬೌದ್ಧ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವರು, ದಲಿತ ಸಮುದಾಯಕ್ಕೆ ಸ್ವಾಭಿಮಾನ ಮತ್ತು ಐಕ್ಯದ ಸಂದೇಶ ನೀಡಿದರು.

ಬೌದ್ಧ ಧರ್ಮಕ್ಕೆ ಹೋಗುವುದು ನಮ್ಮ ಸ್ವಾತಂತ್ರ್ಯದ ಸಂಕೇತ. ಭಾರತ ನಮ್ಮ ದೇಶ. ನಾವು ಈ ದೇಶದ ಮೂಲ ನಿವಾಸಿಗಳು. ದೊಣ್ಣೆ ಕೋಲು ಗನ್‌ನಿಂದ ನಮ್ಮ ಶಕ್ತಿಯನ್ನು ಕಡಿಮೆ ಮಾಡಲು ಬಿಡಬಾರದು. ನಮ್ಮ ವೈಚಾರಿಕತೆ, ಸಂಘಟನೆ ಇನ್ನಷ್ಟು ಗಟ್ಟಿಯಾಗಬೇಕು ಎಂದು ಕರೆ ನೀಡಿದರು.

ದಲಿತರು ನಮಗೆ ನಾವೇ ಹೊಲೆಯ ಮಾದಿಗ ಪದ ಬಳಸಿ ದೊಡ್ಡದು ಮಾಡುತ್ತಿದ್ದೇವೆ. ಇದು ನಮಗೆ ನಾಚಿಕೆ ಆಗಬೇಕು. ನಾವು ಇದಕ್ಕೆ ಬೇರೆ ಪದಗಳನ್ನು ಬಳಸಬೇಕು. ನಾನು ಚಿಕ್ಕವನ್ನಿದ್ದಾಗ ಯಾರಾದರೂ ಹೊಲೆಯ ಮಾದಿಗ ಎಂದರೆ ಜಾತಿ‌ ನಿಂದನೆ ಕೇಸ್ ಹಾಕಿಸುತ್ತಿದ್ದೆ. ಆದರೆ ಈಗ ನಮಗೆ ನಾವೇ ಹೊಲೆಯ ಮಾದಿಗ ಎಂದು ಜೋರಾಗಿ ಹೇಳಿ ಕೊಳ್ಳುತ್ತಿದ್ದೇವೆ. ಇದು ನನಗೆ ನೋವಾಗುತ್ತಿದೆ ಎಂದು ಬೇಸರಿಸಿದರು.

ಇದನ್ನೂ ಓದಿ:-ಭಾರತದಲ್ಲಿ ಬೌದ್ಧ ಧರ್ಮ ಬೆಳೆಯಲು ಮನುವಾದಿಗಳು ಬಿಡಲಿಲ್ಲ : ಸಚಿವ ಸತೀಸ್‌ ಜಾರಕಿಹೊಳಿ ಕಿಡಿ

ಸಿದ್ದರಾಮಯ್ಯಗಾಗಿ ಟೋಂಕ ಕಟ್ಟಿದ್ದ ದಲಿತರು
ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೆಲುವಿಗೆ ದಲಿತರು ಟೋಂಕ ಕಟ್ಟಿ ನಿಂತರು. ಚುನಾವಣೆ ವೇಳೆ ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೆ ಬೆಂಬಲ ನೀಡಿದ್ದಾರೆ ಎಂದು ಅವರು ಪ್ರಶಂಸಿಸಿದರು. 2006ರಲ್ಲಿ ಸಿದ್ದರಾಮಯ್ಯ ಅವರ ರಾಜಕೀಯ ಜೀವನವನ್ನು ನಾಶಪಡಿಸುವ ರಾಜಕೀಯ ಷಡ್ಯಂತ್ರ ನಡೆದಿತ್ತು. ಆಗಲೂ ದಲಿತ ಸಮುದಾಯ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿತ್ತು. ಇಂದು ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಇದೇ ಐತಿಹಾಸಿಕ ಘಟನೆ ಪುನರಾವರ್ತನೆಯಾಗಿದೆ ಎಂದರು.

ಆರ್.ಎಸ್.ಎಸ್ ಉದ್ದೇಶ ಶ್ರೇಣಿಕೃತ ಸಮಾಜವನ್ನು ಜೀವಂತವಾಗಿ ಇಡುವುದಾಗಿದೆ. ಶ್ರೇಣೀಕೃತ ವ್ಯವಸ್ಥೆ ಒಳಗೆ ದಲಿತರನ್ನೆ ಆರ್.ಎಸ್.ಎಸ್ ಸೇರಿಸಿಲ್ಲ. ಬೌದ್ಧ ಧರ್ಮದಲ್ಲಿ ಇತರ ಧರ್ಮಗಳಲ್ಲಿ ಕಾಲ್ಪನಿಕ ಕಥೆಗಳಿಲ್ಲ. ಬುದ್ಧನು ನಿಜವಾದ ಮಾರ್ಗದರ್ಶಿ. ದಲಿತರು ಎರಡನೇ ದರ್ಜೆ ಪ್ರಜೆಗಳಲ್ಲ. ನಾವು ಬ್ರಾಹ್ಮಣ್ಯದ ಗುಲಾಮರಲ್ಲ. ಇಂದು ದಲಿತರು ಎಡಬಿಂಡಗಿ ಆಗಿದ್ದೇವೆ. ಮೂಢನಂಬಿಕೆಯನ್ನು ಪಾಲಿಸುತ್ತೇವೆ, ಬುದ್ದನು ಬೇಕು ಅಂತೀವಿ. ಬುದ್ಧ ಬೇಕು ಎಂದೆ ಈ ಎಡಬಿಡಂಗಿತನ ನಿಲ್ಲಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

4 mins ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

16 mins ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

25 mins ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

43 mins ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

2 hours ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

2 hours ago