ಮೈಸೂರು

ದಲಿತರು ಬೌದ್ಧ ಧರ್ಮಕ್ಕೆ ಹೋದರೆ ಮತಾಂತರ ಅಲ್ಲ : ಸಚಿವ ಮಹದೇವಪ್ಪ

ಮೈಸೂರು : ದಲಿತರು ಬೌದ್ಧ ಧರ್ಮಕ್ಕೆ ಹೋದರೆ ಅದು ಮತಾಂತರ ಅಲ್ಲ. ಧರ್ಮದ ಬಗ್ಗೆ ಜ್ಞಾನ ಇಲ್ಲದವರು ಅದನ್ನು ಮತಾಂತರ ಅನ್ನುತ್ತಾರೆ ಅಷ್ಟೇ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಬೌದ್ಧ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವರು, ದಲಿತ ಸಮುದಾಯಕ್ಕೆ ಸ್ವಾಭಿಮಾನ ಮತ್ತು ಐಕ್ಯದ ಸಂದೇಶ ನೀಡಿದರು.

ಬೌದ್ಧ ಧರ್ಮಕ್ಕೆ ಹೋಗುವುದು ನಮ್ಮ ಸ್ವಾತಂತ್ರ್ಯದ ಸಂಕೇತ. ಭಾರತ ನಮ್ಮ ದೇಶ. ನಾವು ಈ ದೇಶದ ಮೂಲ ನಿವಾಸಿಗಳು. ದೊಣ್ಣೆ ಕೋಲು ಗನ್‌ನಿಂದ ನಮ್ಮ ಶಕ್ತಿಯನ್ನು ಕಡಿಮೆ ಮಾಡಲು ಬಿಡಬಾರದು. ನಮ್ಮ ವೈಚಾರಿಕತೆ, ಸಂಘಟನೆ ಇನ್ನಷ್ಟು ಗಟ್ಟಿಯಾಗಬೇಕು ಎಂದು ಕರೆ ನೀಡಿದರು.

ದಲಿತರು ನಮಗೆ ನಾವೇ ಹೊಲೆಯ ಮಾದಿಗ ಪದ ಬಳಸಿ ದೊಡ್ಡದು ಮಾಡುತ್ತಿದ್ದೇವೆ. ಇದು ನಮಗೆ ನಾಚಿಕೆ ಆಗಬೇಕು. ನಾವು ಇದಕ್ಕೆ ಬೇರೆ ಪದಗಳನ್ನು ಬಳಸಬೇಕು. ನಾನು ಚಿಕ್ಕವನ್ನಿದ್ದಾಗ ಯಾರಾದರೂ ಹೊಲೆಯ ಮಾದಿಗ ಎಂದರೆ ಜಾತಿ‌ ನಿಂದನೆ ಕೇಸ್ ಹಾಕಿಸುತ್ತಿದ್ದೆ. ಆದರೆ ಈಗ ನಮಗೆ ನಾವೇ ಹೊಲೆಯ ಮಾದಿಗ ಎಂದು ಜೋರಾಗಿ ಹೇಳಿ ಕೊಳ್ಳುತ್ತಿದ್ದೇವೆ. ಇದು ನನಗೆ ನೋವಾಗುತ್ತಿದೆ ಎಂದು ಬೇಸರಿಸಿದರು.

ಇದನ್ನೂ ಓದಿ:-ಭಾರತದಲ್ಲಿ ಬೌದ್ಧ ಧರ್ಮ ಬೆಳೆಯಲು ಮನುವಾದಿಗಳು ಬಿಡಲಿಲ್ಲ : ಸಚಿವ ಸತೀಸ್‌ ಜಾರಕಿಹೊಳಿ ಕಿಡಿ

ಸಿದ್ದರಾಮಯ್ಯಗಾಗಿ ಟೋಂಕ ಕಟ್ಟಿದ್ದ ದಲಿತರು
ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೆಲುವಿಗೆ ದಲಿತರು ಟೋಂಕ ಕಟ್ಟಿ ನಿಂತರು. ಚುನಾವಣೆ ವೇಳೆ ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೆ ಬೆಂಬಲ ನೀಡಿದ್ದಾರೆ ಎಂದು ಅವರು ಪ್ರಶಂಸಿಸಿದರು. 2006ರಲ್ಲಿ ಸಿದ್ದರಾಮಯ್ಯ ಅವರ ರಾಜಕೀಯ ಜೀವನವನ್ನು ನಾಶಪಡಿಸುವ ರಾಜಕೀಯ ಷಡ್ಯಂತ್ರ ನಡೆದಿತ್ತು. ಆಗಲೂ ದಲಿತ ಸಮುದಾಯ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿತ್ತು. ಇಂದು ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಇದೇ ಐತಿಹಾಸಿಕ ಘಟನೆ ಪುನರಾವರ್ತನೆಯಾಗಿದೆ ಎಂದರು.

ಆರ್.ಎಸ್.ಎಸ್ ಉದ್ದೇಶ ಶ್ರೇಣಿಕೃತ ಸಮಾಜವನ್ನು ಜೀವಂತವಾಗಿ ಇಡುವುದಾಗಿದೆ. ಶ್ರೇಣೀಕೃತ ವ್ಯವಸ್ಥೆ ಒಳಗೆ ದಲಿತರನ್ನೆ ಆರ್.ಎಸ್.ಎಸ್ ಸೇರಿಸಿಲ್ಲ. ಬೌದ್ಧ ಧರ್ಮದಲ್ಲಿ ಇತರ ಧರ್ಮಗಳಲ್ಲಿ ಕಾಲ್ಪನಿಕ ಕಥೆಗಳಿಲ್ಲ. ಬುದ್ಧನು ನಿಜವಾದ ಮಾರ್ಗದರ್ಶಿ. ದಲಿತರು ಎರಡನೇ ದರ್ಜೆ ಪ್ರಜೆಗಳಲ್ಲ. ನಾವು ಬ್ರಾಹ್ಮಣ್ಯದ ಗುಲಾಮರಲ್ಲ. ಇಂದು ದಲಿತರು ಎಡಬಿಂಡಗಿ ಆಗಿದ್ದೇವೆ. ಮೂಢನಂಬಿಕೆಯನ್ನು ಪಾಲಿಸುತ್ತೇವೆ, ಬುದ್ದನು ಬೇಕು ಅಂತೀವಿ. ಬುದ್ಧ ಬೇಕು ಎಂದೆ ಈ ಎಡಬಿಡಂಗಿತನ ನಿಲ್ಲಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

2 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

3 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

3 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

4 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

5 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

9 hours ago