ಮೈಸೂರು

ದಲಿತರು ಬೌದ್ಧ ಧರ್ಮಕ್ಕೆ ಹೋದರೆ ಮತಾಂತರ ಅಲ್ಲ : ಸಚಿವ ಮಹದೇವಪ್ಪ

ಮೈಸೂರು : ದಲಿತರು ಬೌದ್ಧ ಧರ್ಮಕ್ಕೆ ಹೋದರೆ ಅದು ಮತಾಂತರ ಅಲ್ಲ. ಧರ್ಮದ ಬಗ್ಗೆ ಜ್ಞಾನ ಇಲ್ಲದವರು ಅದನ್ನು ಮತಾಂತರ ಅನ್ನುತ್ತಾರೆ ಅಷ್ಟೇ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಬೌದ್ಧ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವರು, ದಲಿತ ಸಮುದಾಯಕ್ಕೆ ಸ್ವಾಭಿಮಾನ ಮತ್ತು ಐಕ್ಯದ ಸಂದೇಶ ನೀಡಿದರು.

ಬೌದ್ಧ ಧರ್ಮಕ್ಕೆ ಹೋಗುವುದು ನಮ್ಮ ಸ್ವಾತಂತ್ರ್ಯದ ಸಂಕೇತ. ಭಾರತ ನಮ್ಮ ದೇಶ. ನಾವು ಈ ದೇಶದ ಮೂಲ ನಿವಾಸಿಗಳು. ದೊಣ್ಣೆ ಕೋಲು ಗನ್‌ನಿಂದ ನಮ್ಮ ಶಕ್ತಿಯನ್ನು ಕಡಿಮೆ ಮಾಡಲು ಬಿಡಬಾರದು. ನಮ್ಮ ವೈಚಾರಿಕತೆ, ಸಂಘಟನೆ ಇನ್ನಷ್ಟು ಗಟ್ಟಿಯಾಗಬೇಕು ಎಂದು ಕರೆ ನೀಡಿದರು.

ದಲಿತರು ನಮಗೆ ನಾವೇ ಹೊಲೆಯ ಮಾದಿಗ ಪದ ಬಳಸಿ ದೊಡ್ಡದು ಮಾಡುತ್ತಿದ್ದೇವೆ. ಇದು ನಮಗೆ ನಾಚಿಕೆ ಆಗಬೇಕು. ನಾವು ಇದಕ್ಕೆ ಬೇರೆ ಪದಗಳನ್ನು ಬಳಸಬೇಕು. ನಾನು ಚಿಕ್ಕವನ್ನಿದ್ದಾಗ ಯಾರಾದರೂ ಹೊಲೆಯ ಮಾದಿಗ ಎಂದರೆ ಜಾತಿ‌ ನಿಂದನೆ ಕೇಸ್ ಹಾಕಿಸುತ್ತಿದ್ದೆ. ಆದರೆ ಈಗ ನಮಗೆ ನಾವೇ ಹೊಲೆಯ ಮಾದಿಗ ಎಂದು ಜೋರಾಗಿ ಹೇಳಿ ಕೊಳ್ಳುತ್ತಿದ್ದೇವೆ. ಇದು ನನಗೆ ನೋವಾಗುತ್ತಿದೆ ಎಂದು ಬೇಸರಿಸಿದರು.

ಇದನ್ನೂ ಓದಿ:-ಭಾರತದಲ್ಲಿ ಬೌದ್ಧ ಧರ್ಮ ಬೆಳೆಯಲು ಮನುವಾದಿಗಳು ಬಿಡಲಿಲ್ಲ : ಸಚಿವ ಸತೀಸ್‌ ಜಾರಕಿಹೊಳಿ ಕಿಡಿ

ಸಿದ್ದರಾಮಯ್ಯಗಾಗಿ ಟೋಂಕ ಕಟ್ಟಿದ್ದ ದಲಿತರು
ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೆಲುವಿಗೆ ದಲಿತರು ಟೋಂಕ ಕಟ್ಟಿ ನಿಂತರು. ಚುನಾವಣೆ ವೇಳೆ ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೆ ಬೆಂಬಲ ನೀಡಿದ್ದಾರೆ ಎಂದು ಅವರು ಪ್ರಶಂಸಿಸಿದರು. 2006ರಲ್ಲಿ ಸಿದ್ದರಾಮಯ್ಯ ಅವರ ರಾಜಕೀಯ ಜೀವನವನ್ನು ನಾಶಪಡಿಸುವ ರಾಜಕೀಯ ಷಡ್ಯಂತ್ರ ನಡೆದಿತ್ತು. ಆಗಲೂ ದಲಿತ ಸಮುದಾಯ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿತ್ತು. ಇಂದು ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಇದೇ ಐತಿಹಾಸಿಕ ಘಟನೆ ಪುನರಾವರ್ತನೆಯಾಗಿದೆ ಎಂದರು.

ಆರ್.ಎಸ್.ಎಸ್ ಉದ್ದೇಶ ಶ್ರೇಣಿಕೃತ ಸಮಾಜವನ್ನು ಜೀವಂತವಾಗಿ ಇಡುವುದಾಗಿದೆ. ಶ್ರೇಣೀಕೃತ ವ್ಯವಸ್ಥೆ ಒಳಗೆ ದಲಿತರನ್ನೆ ಆರ್.ಎಸ್.ಎಸ್ ಸೇರಿಸಿಲ್ಲ. ಬೌದ್ಧ ಧರ್ಮದಲ್ಲಿ ಇತರ ಧರ್ಮಗಳಲ್ಲಿ ಕಾಲ್ಪನಿಕ ಕಥೆಗಳಿಲ್ಲ. ಬುದ್ಧನು ನಿಜವಾದ ಮಾರ್ಗದರ್ಶಿ. ದಲಿತರು ಎರಡನೇ ದರ್ಜೆ ಪ್ರಜೆಗಳಲ್ಲ. ನಾವು ಬ್ರಾಹ್ಮಣ್ಯದ ಗುಲಾಮರಲ್ಲ. ಇಂದು ದಲಿತರು ಎಡಬಿಂಡಗಿ ಆಗಿದ್ದೇವೆ. ಮೂಢನಂಬಿಕೆಯನ್ನು ಪಾಲಿಸುತ್ತೇವೆ, ಬುದ್ದನು ಬೇಕು ಅಂತೀವಿ. ಬುದ್ಧ ಬೇಕು ಎಂದೆ ಈ ಎಡಬಿಡಂಗಿತನ ನಿಲ್ಲಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

2 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

3 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

3 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

4 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

5 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

6 hours ago