ಮೈಸೂರು

ಹನುಮ ಜಯಂತಿ ಮಾಡಿದರೆ ನನ್ನನ್ನೂ ಸಾಯಿಸುತ್ತಾರೆ: ವೇಣುಗೋಪಾಲ್ ಪತ್ನಿ ಆರೋಪ

ಮೈಸೂರು: `ನನ್ನ ಗಂಡನ ಕೊಲೆ ವೈಯಕ್ತಿಕ ಕಾರಣದಿಂದ ನಡೆದಿಲ್ಲ. ಧರ್ಮದ ವಿಚಾರದಲ್ಲಿಯೇ ಆಗಿದೆ’ ಎಂದು ತಿ.ನರಸೀಪುರದಲ್ಲಿ ಕೊಲೆಯಾದ ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಆರೋಪಿಸಿದರು.

ಓವರಸೀಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದ ಅವರು, “ನಾನು ಹಾಗೂ ವೇಣುಗೋಪಾಲ್‌ ಪ್ರೀತಿಸಿ ಮದುವೆಯಾಗಿದ್ದವು. ಮೂರು ವರ್ಷಗಳಿಂದ ಹನುಮ ಜಯಂತಿ ಆಚರಣೆ ಮಾಡುತ್ತಿದ್ದೇವೆ. ನನ್ನ ಗಂಡನ ಬಳಿ ಹಣ ಇಲ್ಲ, ಅಧಿಕಾರ ಇರಲಿಲ್ಲ. ಆದರೂ ಹನುಮ ಜಯಂತಿಯಲ್ಲಿ ನೇತೃತ್ವ ವಹಿಸಿ ಆದೂರಿಯಾಗಿ ನಡೆಸುತ್ತಿದ್ದರು. ಅದನ್ನು ಸಹಿಸದೆ ಕೊಲೆ ಮಾಡಿದ್ದಾರೆ” ಎಂದು ಆರೋಪಿಸಿದರು.

“ನನ್ನ ಗಂಡನ ಸಾವಿಗೆ ನ್ಯಾಯ ಬೇಕು. ಇಲ್ಲವಾದರೆ ನಾನು, ನನ್ನ ಮಗಳು ಕೂಡ ಅವರಂತೆಯೇ ಸಾಯುತ್ತೇವೆ. ಮುಂದಿನ ವರ್ಷ ನಾನೂ ಹನುಮ ಜಯಂತಿ ಮಾಡುತ್ತೇನೆ. ಆಗ ನನ್ನನ್ನೂ ಸಾಯಿಸುತ್ತಾರೆ, ಅದರ ಮುಂದಿನ ವರ್ಷ ನನ್ನ ಮಗಳು ಹನುಮ ಜಯಂತಿ ಮಾಡಿದರೆ ಆಕೆಯನ್ನೂ ಸಾಯಿಸುತ್ತಾರೆ. ಅಲ್ಲಿಗೆ ಹಿಂದೂ ಧರ್ಮವೂ ಸಾಯುತ್ತದೆ. ನನ್ನ ಗಂಡನ ಏಳಿಗೆ ಸಹಿಸದೆ ಕೊಲೆ ಮಾಡಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

2 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

4 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

4 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

5 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

5 hours ago