ಮೈಸೂರು: `ನನ್ನ ಗಂಡನ ಕೊಲೆ ವೈಯಕ್ತಿಕ ಕಾರಣದಿಂದ ನಡೆದಿಲ್ಲ. ಧರ್ಮದ ವಿಚಾರದಲ್ಲಿಯೇ ಆಗಿದೆ’ ಎಂದು ತಿ.ನರಸೀಪುರದಲ್ಲಿ ಕೊಲೆಯಾದ ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಆರೋಪಿಸಿದರು.
ಓವರಸೀಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದ ಅವರು, “ನಾನು ಹಾಗೂ ವೇಣುಗೋಪಾಲ್ ಪ್ರೀತಿಸಿ ಮದುವೆಯಾಗಿದ್ದವು. ಮೂರು ವರ್ಷಗಳಿಂದ ಹನುಮ ಜಯಂತಿ ಆಚರಣೆ ಮಾಡುತ್ತಿದ್ದೇವೆ. ನನ್ನ ಗಂಡನ ಬಳಿ ಹಣ ಇಲ್ಲ, ಅಧಿಕಾರ ಇರಲಿಲ್ಲ. ಆದರೂ ಹನುಮ ಜಯಂತಿಯಲ್ಲಿ ನೇತೃತ್ವ ವಹಿಸಿ ಆದೂರಿಯಾಗಿ ನಡೆಸುತ್ತಿದ್ದರು. ಅದನ್ನು ಸಹಿಸದೆ ಕೊಲೆ ಮಾಡಿದ್ದಾರೆ” ಎಂದು ಆರೋಪಿಸಿದರು.
“ನನ್ನ ಗಂಡನ ಸಾವಿಗೆ ನ್ಯಾಯ ಬೇಕು. ಇಲ್ಲವಾದರೆ ನಾನು, ನನ್ನ ಮಗಳು ಕೂಡ ಅವರಂತೆಯೇ ಸಾಯುತ್ತೇವೆ. ಮುಂದಿನ ವರ್ಷ ನಾನೂ ಹನುಮ ಜಯಂತಿ ಮಾಡುತ್ತೇನೆ. ಆಗ ನನ್ನನ್ನೂ ಸಾಯಿಸುತ್ತಾರೆ, ಅದರ ಮುಂದಿನ ವರ್ಷ ನನ್ನ ಮಗಳು ಹನುಮ ಜಯಂತಿ ಮಾಡಿದರೆ ಆಕೆಯನ್ನೂ ಸಾಯಿಸುತ್ತಾರೆ. ಅಲ್ಲಿಗೆ ಹಿಂದೂ ಧರ್ಮವೂ ಸಾಯುತ್ತದೆ. ನನ್ನ ಗಂಡನ ಏಳಿಗೆ ಸಹಿಸದೆ ಕೊಲೆ ಮಾಡಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…