ಮೈಸೂರು

ಪ್ರತಾಪ್‌ ಸಿಂಹರ ಬಳಿ ಆ ಒಂದು ವಿಷಯ ಕಲಿಯುತ್ತೇನೆ: ಸಿಂಹ ಕಾಲೆಳೆದ ಲಕ್ಷ್ಮಣ್‌

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಅವರು, ಚುನಾವಣಾ ಪ್ರಚಾರದಲ್ಲಿ ಹಗಳಿರುಳು ದುಡಿದ ಪಕ್ಷದ ಮುಖಂಡರು, ಕಾರ್ಯಕರ್ತರು, ಎಲ್ಲಾ ಸಂಘಟನೆಗಳು ಸೇರಿದಂತೆ ತಮಗಾಗಿ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತದಾನ ನಡೆಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಹಾಗೂ ಈ ಬಾರಿ ಶೇ 80 ರಷ್ಟು ಮಹಿಳೆಯರ ಮತಗಳು ತಮಗೆ ಬಂದಿರುವುದಾಗಿ ಅವರು ತಿಳಿಸಿದರು.

ಒಂದು ವೇಳೆ ಈ ಚುನಾವಣೆಯಲ್ಲಿ ತಾವು ಗೆದ್ದಿದ್ದೇ ಆದರೇ, ಮೈಸೂರು ಹಾಗೂ ಕೊಡಗಿನಲ್ಲಿ ಒಂದೊಂದು ಕಚೇರಿ ಸ್ಥಾಪಿಸಿ, 15 ದಿನ ಮೈಸೂರು ಮತ್ತು 15 ದಿನ ಕೊಡಗಿನಲ್ಲಿ ವಾಸ್ತವ್ಯ ಹೂಡಿ ಜನರಿಗೆ ಸ್ಪಂದಿಸುವುತ್ತೇನೆ. ಮತ್ತು ತಮ್ಮ ಕ್ಷೇತ್ರದಲ್ಲಿ ಯಾವುದೇ ಪಕ್ಷದ ಶಾಸಕರಾಗಿದ್ದರೂ ಅವರೊಂದಿಗೆ ಸಮನ್ವಯತೆ ಸಾಧಿಸಿ ಕೆಲಸ ಮಾಡಿಕೊಂಡು ಹೋಗಲಾಗುವುದು ಎಂದು ಅವರು ಹೇಳಿದರು.

ಇನ್ನು ತಮ್ಮ ಗೋಷ್ಠಯ ವೇಳೆ ಸಂಸದ ಪ್ರತಾಪ್‌ ಸಿಂಹ ಅವರನ್ನು ನೆನೆದಿರುವ ಅವರು, ಕಳೆದ 20-25 ದಿನಗಳಿಂದ ಪ್ರತಾಪ್‌ ಸಿಂಹ ಪತ್ತೆಯಿಲ್ಲ. ಎಲ್ಲಿದ್ದಾರೋ ಗೊತ್ತಿಲ್ಲ, ಆದರೆ ಅವರನ್ನು ಭೇಟಿಯಾದರೇ ಸತ್ಯದ ನೆತ್ತಯ ಮೇಲೆ ಒಡೆದು ಸುಳ್ಳು ಹೇಳುವುದು ಹೇಗೆ ಎಂಬುದನ್ನು ಕಲಿಯುತ್ತೇನೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

3 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

3 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

4 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

4 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

4 hours ago