ಹುಬ್ಬಳ್ಳಿ : ಯಾರೇ ಮಾಡಿದ್ದರು ಇದು ಕ್ಷಮಿಸಲಾರದ ಅಪರಾದ ಎಂದು ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಪ್ರತಿಕ್ರಿಯೆ ನೀಡಿದರು.
ಹುಬ್ಬಳ್ಳಿಯಲ್ಲಿ ಇಂದು ನಡೆಯಲಿರುವ ಕೋರ್ಕಮಿಟಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ವೇಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ವ್ಯಕ್ತಿಯಾಗಲಿ ತಪ್ಪು ಮಾಡಿದರೆ ವಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಸರ್ಕಾರ ಎಸ್ಐಟಿ ರಚನೆಯಾಗಿದೆ ತನಿಖೆ ಮಾಡಿ ತಪ್ಪಿತಸ್ತರಿಗೆ ಶಿಕ್ಷೆ ನೀಡಲಿ. ಆದರೆ ಈ ಘಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವವರ ವಿರುದ್ಧ ಹಾಗೂ ಈ ವೀಡಿಯೋ ಇರುವ ಪೆಂಡ್ರೈವ್ ಹಂಚಿ ಹೆಣ್ಣುಮಕ್ಕಳಿಗೆ ಅವಮಾನ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದರು.
ಇದು ಕ್ಷಮಿಸಲಾರದ ಅಪರಾಧ. ಇದರ ಬಗ್ಗೆ ಮಾತನಾಡುವುದು ಅಸಹ್ಯ. ಆದರೇ ಅದು ಸಾಭೀತು ಆಗಬೇಕು. ತಪ್ಪು ಮಾಡಿದವರು ಹಾಗೂ ಅದನ್ನು ಹಂಚುವ ಮೂಲಕ ಹೆಣ್ಣುಮಕ್ಕಳನ್ನು ಬೀದಿಗೆ ತಂದವರ ವಿರುದ್ಧವೂ ಕ್ರಮವಾಗುವ ಕುರಿತಂತೆ ಎಲ್ಲಾ ವಿಚಾರಗಳ ಬಗ್ಗೆ ಇಂದು ಕರೆದಿರುವ ಕೋರ್ಕಮಿಟಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…
ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…