ಹುಬ್ಬಳ್ಳಿ : ಯಾರೇ ಮಾಡಿದ್ದರು ಇದು ಕ್ಷಮಿಸಲಾರದ ಅಪರಾದ ಎಂದು ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಪ್ರತಿಕ್ರಿಯೆ ನೀಡಿದರು.
ಹುಬ್ಬಳ್ಳಿಯಲ್ಲಿ ಇಂದು ನಡೆಯಲಿರುವ ಕೋರ್ಕಮಿಟಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ವೇಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ವ್ಯಕ್ತಿಯಾಗಲಿ ತಪ್ಪು ಮಾಡಿದರೆ ವಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಸರ್ಕಾರ ಎಸ್ಐಟಿ ರಚನೆಯಾಗಿದೆ ತನಿಖೆ ಮಾಡಿ ತಪ್ಪಿತಸ್ತರಿಗೆ ಶಿಕ್ಷೆ ನೀಡಲಿ. ಆದರೆ ಈ ಘಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವವರ ವಿರುದ್ಧ ಹಾಗೂ ಈ ವೀಡಿಯೋ ಇರುವ ಪೆಂಡ್ರೈವ್ ಹಂಚಿ ಹೆಣ್ಣುಮಕ್ಕಳಿಗೆ ಅವಮಾನ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದರು.
ಇದು ಕ್ಷಮಿಸಲಾರದ ಅಪರಾಧ. ಇದರ ಬಗ್ಗೆ ಮಾತನಾಡುವುದು ಅಸಹ್ಯ. ಆದರೇ ಅದು ಸಾಭೀತು ಆಗಬೇಕು. ತಪ್ಪು ಮಾಡಿದವರು ಹಾಗೂ ಅದನ್ನು ಹಂಚುವ ಮೂಲಕ ಹೆಣ್ಣುಮಕ್ಕಳನ್ನು ಬೀದಿಗೆ ತಂದವರ ವಿರುದ್ಧವೂ ಕ್ರಮವಾಗುವ ಕುರಿತಂತೆ ಎಲ್ಲಾ ವಿಚಾರಗಳ ಬಗ್ಗೆ ಇಂದು ಕರೆದಿರುವ ಕೋರ್ಕಮಿಟಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…