ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳು ಸಜ್ಜಾಗಿದ್ದಾರೆ. ಈಗಾಗಲೇ ಹುರಿಯಾಳುಗಳ ಮೊದಲ ಪಟ್ಟಿ ರಿಲೀಸ್ ಗೆ ತಯಾರಿ ನಡೆದಿದೆ.
ಚಾಮುಂಡಿ ಬೆಟ್ಟದಲ್ಲಿ ತಮ್ಮ ಕುಟುಂಬ ಹಾಗೂ ಜೆಡಿಎಸ್ ನಾಯಕರ ಜೊತೆಗೆ ತಾಯಿಯ ದರ್ಶನ ಪಡೆದ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು. 30 – 40 ಸ್ಥಾನ ಬಂದ್ರೆ ನಾನು ಸಿಎಂ ಆಗುತ್ತೇನೆ ಎಂದು ನಮ್ಮವರು ಅಂದುಕೊಳ್ಳೋದು ಬೇಡ. ಈ ಬಾರಿ ಬಹುಮತ ಕೊಡಿ, ಪಂಚರತ್ನ ಯೋಜನೆ ಅನುಷ್ಠಾನ ಮಾಡುತ್ತೇನೆ, ಪಂಚರತ್ನದ 5 ಯೋಜನೆಗಳನ್ನು 5 ವರ್ಷಗಳಲ್ಲಿ ಅನುಷ್ಠಾನಗೊಳಿಸುತ್ತೇನೆ.
ಕಾರ್ಯಕ್ರಮ ಅನುಷ್ಠಾನ ಮಾಡದಿದ್ರೆ ನಾನು ಪಕ್ಷ ವಿಸರ್ಜನೆ ಮಾಡುತ್ತೇನೆ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಿಂತು ಈ ಮಾತನ್ನು ಹೇಳುತ್ತಿದ್ದೇನೆ ಎಂದರು. ಈ ಕುರಿತು ಚಾಮುಂಡಿ ಬೆಟ್ಟದಲ್ಲಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈ ಬಾರಿ ಜೆ ಡಿ ಎಸ್ ಗೆ 30-40 ಸ್ಥಾನ ಬಂದ್ರೆ ನಾನು ಅಧಿಕಾರದಿಂದ ದೂರವಿರುತ್ತೇನೆ. ನಮ್ಮಲ್ಲೇ ಒಬ್ಬರನ್ನ ಆ ಸ್ಥಾನದಲ್ಲಿ ಕೂರಿಸಿ ನಾನು ಮಾರ್ಗದರ್ಶನ ಮಾಡುತ್ತೇನೆ ಇದು ನನ್ನ ನಿರ್ಧಾರವಾಗಿದೆ ಎಂದು ಹೇಳಿದ್ದರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…