ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳು ಸಜ್ಜಾಗಿದ್ದಾರೆ. ಈಗಾಗಲೇ ಹುರಿಯಾಳುಗಳ ಮೊದಲ ಪಟ್ಟಿ ರಿಲೀಸ್ ಗೆ ತಯಾರಿ ನಡೆದಿದೆ.
ಚಾಮುಂಡಿ ಬೆಟ್ಟದಲ್ಲಿ ತಮ್ಮ ಕುಟುಂಬ ಹಾಗೂ ಜೆಡಿಎಸ್ ನಾಯಕರ ಜೊತೆಗೆ ತಾಯಿಯ ದರ್ಶನ ಪಡೆದ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು. 30 – 40 ಸ್ಥಾನ ಬಂದ್ರೆ ನಾನು ಸಿಎಂ ಆಗುತ್ತೇನೆ ಎಂದು ನಮ್ಮವರು ಅಂದುಕೊಳ್ಳೋದು ಬೇಡ. ಈ ಬಾರಿ ಬಹುಮತ ಕೊಡಿ, ಪಂಚರತ್ನ ಯೋಜನೆ ಅನುಷ್ಠಾನ ಮಾಡುತ್ತೇನೆ, ಪಂಚರತ್ನದ 5 ಯೋಜನೆಗಳನ್ನು 5 ವರ್ಷಗಳಲ್ಲಿ ಅನುಷ್ಠಾನಗೊಳಿಸುತ್ತೇನೆ.
ಕಾರ್ಯಕ್ರಮ ಅನುಷ್ಠಾನ ಮಾಡದಿದ್ರೆ ನಾನು ಪಕ್ಷ ವಿಸರ್ಜನೆ ಮಾಡುತ್ತೇನೆ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಿಂತು ಈ ಮಾತನ್ನು ಹೇಳುತ್ತಿದ್ದೇನೆ ಎಂದರು. ಈ ಕುರಿತು ಚಾಮುಂಡಿ ಬೆಟ್ಟದಲ್ಲಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈ ಬಾರಿ ಜೆ ಡಿ ಎಸ್ ಗೆ 30-40 ಸ್ಥಾನ ಬಂದ್ರೆ ನಾನು ಅಧಿಕಾರದಿಂದ ದೂರವಿರುತ್ತೇನೆ. ನಮ್ಮಲ್ಲೇ ಒಬ್ಬರನ್ನ ಆ ಸ್ಥಾನದಲ್ಲಿ ಕೂರಿಸಿ ನಾನು ಮಾರ್ಗದರ್ಶನ ಮಾಡುತ್ತೇನೆ ಇದು ನನ್ನ ನಿರ್ಧಾರವಾಗಿದೆ ಎಂದು ಹೇಳಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…