ಮೈಸೂರು

ಪ್ರತಾಪ್ ಸಿಂಹಗೆ ಆಸೆ ಇದ್ರೆ ಇನ್ನೊಂದು ಮದುವೆಯಾಗಿ, ಅದರ ಅನುಭವ ಹೇಳಲಿ : ತನ್ವೀರ್ ಸೇಠ್

ಮೈಸೂರು : ಗೃಹಲಕ್ಷ್ಮೀ ಯೋಜನೆ ಜಾರಿಯಿಂದ ಕುಟುಂಬಗಳಲ್ಲಿ ಒಡಕುಂಟಾಗಿದೆ. ಮುಸ್ಲಿಮರಿಗೆ ಎರಡು-ಮೂರು ಹೆಂಡತಿಯರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಅಂತ ಗುರುತಿಸುತ್ತೀರಿ ಎಂದಿದ್ದ ಸಂಸದ ಪ್ರತಾಪ್ ಸಿಂಹಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ, ಅದರ ಅನುಭವವನ್ನು ನಮಗೆ ಬಂದು ಹೇಳಲಿ ಎಂದು ಟಾಂಗ್ ಕೊಟ್ಟಿದ್ದಾರೆ.

ಅಡ್ಜೆಸ್ಟ್ ಮೆಂಟ್ ಪಾಲಿಟಿಕ್ಸ್ ಬಗ್ಗೆ ಮಾತನಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಅಡ್ಜೆಸ್ಟ್ ಮೆಂಟ್ ರಾಜಕೀಯ ನನಗೆ ಗೊತ್ತಿಲ್ಲ. ಆ ರೀತಿ ಮಾಡಿರುವವರಿಗೆ ಆ ವಿಚಾರ ಗೊತ್ತು. ಅಡ್ಜೆಸ್ಟ್ ಮೆಂಟ್ ಮಾಡ್ಕೊಂಡು ಒಬ್ಬರನ್ನು ತುಳಿಯಲು ಮತ್ತೊಬ್ಬರನ್ನು ಬಳಸಿಕೊಳ್ಳೋದು ಸರಿಯಲ್ಲ. ಅನುಭವ ಇರುವವರು ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ನಾನು ಸದನದಲ್ಲಿ ಉತ್ತರಿಸುತ್ತೇನೆ : ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟದಲ್ಲಿ ನಾನಿಲ್ಲ. ಹೀಗಾಗಿ, ಸಂಪುಟ ಸಭೆಯಲ್ಲಿ ಏನು ಚರ್ಚೆಯಾಗಿದೆ ಅಂತ ಗೊತ್ತಿಲ್ಲ. ಮುಂದೆ ಈ ವಿಚಾರ ಸದನದಲ್ಲಿ ಚರ್ಚೆಗೆ ಬಂದಾಗ ಉತ್ತರಿಸುತ್ತೇನೆ ಎಂದು ತಿಳಿಸಿದ್ದಾರೆ.

ಮನುಷ್ಯನ ಆಸೆಗೆ ಕೊನೆಯಿಲ್ಲ : ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ನಿರಾಸೆಯಾಗಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಿರುವ ಖುಷಿಯಿದೆ. ಮನುಷ್ಯನ ಆಸೆಗೆ ಕೊನೆಯಿಲ್ಲ, 34ಕ್ಕೆ 34 ಸಚಿವ ಸ್ಥಾನಗಳು ಭರ್ತಿಯಾಗಿವೆ. ಅಧಿಕಾರ ಹಂಚಿಕೆ ಸಂಬಂಧ ನಡೆದಿರುವ ಗೌಪ್ಯ ಸಭೆಯ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

lokesh

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago