ಮೈಸೂರು

ಪ್ರತಾಪ್ ಸಿಂಹಗೆ ಆಸೆ ಇದ್ರೆ ಇನ್ನೊಂದು ಮದುವೆಯಾಗಿ, ಅದರ ಅನುಭವ ಹೇಳಲಿ : ತನ್ವೀರ್ ಸೇಠ್

ಮೈಸೂರು : ಗೃಹಲಕ್ಷ್ಮೀ ಯೋಜನೆ ಜಾರಿಯಿಂದ ಕುಟುಂಬಗಳಲ್ಲಿ ಒಡಕುಂಟಾಗಿದೆ. ಮುಸ್ಲಿಮರಿಗೆ ಎರಡು-ಮೂರು ಹೆಂಡತಿಯರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಅಂತ ಗುರುತಿಸುತ್ತೀರಿ ಎಂದಿದ್ದ ಸಂಸದ ಪ್ರತಾಪ್ ಸಿಂಹಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ, ಅದರ ಅನುಭವವನ್ನು ನಮಗೆ ಬಂದು ಹೇಳಲಿ ಎಂದು ಟಾಂಗ್ ಕೊಟ್ಟಿದ್ದಾರೆ.

ಅಡ್ಜೆಸ್ಟ್ ಮೆಂಟ್ ಪಾಲಿಟಿಕ್ಸ್ ಬಗ್ಗೆ ಮಾತನಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಅಡ್ಜೆಸ್ಟ್ ಮೆಂಟ್ ರಾಜಕೀಯ ನನಗೆ ಗೊತ್ತಿಲ್ಲ. ಆ ರೀತಿ ಮಾಡಿರುವವರಿಗೆ ಆ ವಿಚಾರ ಗೊತ್ತು. ಅಡ್ಜೆಸ್ಟ್ ಮೆಂಟ್ ಮಾಡ್ಕೊಂಡು ಒಬ್ಬರನ್ನು ತುಳಿಯಲು ಮತ್ತೊಬ್ಬರನ್ನು ಬಳಸಿಕೊಳ್ಳೋದು ಸರಿಯಲ್ಲ. ಅನುಭವ ಇರುವವರು ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ನಾನು ಸದನದಲ್ಲಿ ಉತ್ತರಿಸುತ್ತೇನೆ : ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟದಲ್ಲಿ ನಾನಿಲ್ಲ. ಹೀಗಾಗಿ, ಸಂಪುಟ ಸಭೆಯಲ್ಲಿ ಏನು ಚರ್ಚೆಯಾಗಿದೆ ಅಂತ ಗೊತ್ತಿಲ್ಲ. ಮುಂದೆ ಈ ವಿಚಾರ ಸದನದಲ್ಲಿ ಚರ್ಚೆಗೆ ಬಂದಾಗ ಉತ್ತರಿಸುತ್ತೇನೆ ಎಂದು ತಿಳಿಸಿದ್ದಾರೆ.

ಮನುಷ್ಯನ ಆಸೆಗೆ ಕೊನೆಯಿಲ್ಲ : ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ನಿರಾಸೆಯಾಗಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಿರುವ ಖುಷಿಯಿದೆ. ಮನುಷ್ಯನ ಆಸೆಗೆ ಕೊನೆಯಿಲ್ಲ, 34ಕ್ಕೆ 34 ಸಚಿವ ಸ್ಥಾನಗಳು ಭರ್ತಿಯಾಗಿವೆ. ಅಧಿಕಾರ ಹಂಚಿಕೆ ಸಂಬಂಧ ನಡೆದಿರುವ ಗೌಪ್ಯ ಸಭೆಯ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

23 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

23 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

24 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

24 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

24 hours ago