ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತವನ್ನು ವಿರೋಧ ಮಾಡಲು ಯಾವ ವಿಷಯವೂ ಇಲ್ಲದೆ ಬಿಜೆಪಿ ಮತ್ತು ಜೆಡಿಎಸ್ ಮೂಡಾ ಹಗರಣ ಸೃಷ್ಟಿಸಿ ಸಿಎಂ ವಿರುದ್ಧ ಇಲ್ಲಾಸಲ್ಲದ ಆರೋಪ ಮಾಡಿದರೆ ದಲಿತರು ಕೈಕಟ್ಟಿ ಕೂರುವುದಿಲ್ಲ ಎಂದು ನಗರದ ಮಾಜಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಅಜಯ್ ಸಿದ್ದರಾಜು ಎಚ್ಚರಿಸಿದರು.
ಸಿದ್ದರಾಮಯ್ಯ ಅವರ ದಕ್ಷ ಆಡಳಿತ ಮತ್ತು ಜನಪ್ರಿಯತೆ ಸಹಿಸಲಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬಾಲಸುಟ್ಟ ಮಂಗನಂತೆ ಆಡುತ್ತಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಆಡಳಿತ ರಾಜ್ಯದ ಮನೆಮನೆಗೂ ತಲುಪಿರುವುದನ್ನು ಸಹಿಸದ ಸಂವಿಧಾನ ವಿರೋಧಿಗಳು ಸುಳ್ಳು ಹೇಳಿಕೊಂಡು ಬೀದಿ ಸುತ್ತುತ್ತಿದ್ದಾರೆ. ಇವರ ಸುಳ್ಳಿಗೆ ಸೊಪ್ಪಾಕದೆ ದಲಿತ ಸಮುದಾಯ ಎಚ್ಚರ ವಹಿಸಬೇಕೆಂದು ಅಜಯ್ ತಿಳಿಸಿದರು.
ದಲಿತ ವರ್ಗದ ಪರ ಸಿಎಂ ಸಿದ್ದರಾಮಯ್ಯ ಅವರ ಬದ್ಧತೆ ಪ್ರಶ್ನಾತೀತವಾದುದು. ಅವರ ಅಧಿಕಾರಾವಧಿಯಲ್ಲಿ ದಲಿತರ ಶ್ರೇಯೋಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕಾರ್ಯಕ್ರಮಗಳನ್ನು ನೀಡಿದ್ದಾರೆ. ದಲಿತ ಸಮುದಾಯದ ಮೇಲಿನ ಪ್ರಾಮಾಣಿಕ ಕಾಳಜಿಯ ಕಾರಣಕ್ಕಾಗಿಯೇ ರಾಜ್ಯದಲ್ಲಿ ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆಯನ್ನು ಜಾರಿಗೆ ತಂದರು. ದಲಿತರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬಿರುವ ಮುಖ್ಯಮಂತ್ರಿಯವರ ಕೈ ಬಲಪಡಿಸುವುದರ ಜೊತೆಗೆ ಅವರ ಬೆನ್ನಿಂದೆ ದಲಿತ ಸಮುದಾಯ ನಿಲ್ಲುತ್ತದೆ ಎಂದು ತಿಳಿಸಿದರು.
ಬಿಜೆಪಿಯವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಮುಖ್ಯಮಂತ್ರಿಗಳಿಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯಬೇಕು ಮತ್ತು ಒಂದು ವೇಳೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ದಲಿತರು ರಾಜ್ಯದಲ್ಲಿ ದಂಗೆ ಹೇಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಿಜೆಪಿ ಮತ್ತು ಜೆಡಿಎಸ್ ಅಧಿಕಾರದ ಅವಧಿಯಲ್ಲಿ ನಡೆದಿರುವ ಮೂಡ ಹಗರಣವನ್ನು ಸಿದ್ದರಾಮಯ್ಯನವರ ತಲೆಗೆ ಕಟ್ಟಲು ಪ್ರಯತ್ನಿಸುತ್ತಿದ್ದಾರೆ. ಅವರು ನಡೆಸುತ್ತಿರುವ ಪಾದಯಾತ್ರೆ ಕೇವಲ ಫೋಟೋಶೂಟ್ ಮತ್ತು ಸೆಲ್ಫಿ ತೆಗೆದುಕೊಳ್ಳಲು ನಡೆಯುತ್ತಿರುವ ಹೋರಾಟವೇ ಹೊರತು ಬೇರೇನಿಲ್ಲ ಎಂದು ತಿಳಿಸಿದರು
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…