ಮೈಸೂರು

ಸಿದ್ದರಾಮಯ್ಯರನ್ನು ಮುಟ್ಟಿದರೆ ದಲಿತರು ದಂಗೆ ಹೇಳುತ್ತಾರೆ: ಅಜಯ್ ಸಿದ್ದರಾಜು

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತವನ್ನು ವಿರೋಧ ಮಾಡಲು ಯಾವ ವಿಷಯವೂ ಇಲ್ಲದೆ ಬಿಜೆಪಿ ಮತ್ತು ಜೆಡಿಎಸ್ ಮೂಡಾ ಹಗರಣ ಸೃಷ್ಟಿಸಿ ಸಿಎಂ ವಿರುದ್ಧ ಇಲ್ಲಾಸಲ್ಲದ ಆರೋಪ ಮಾಡಿದರೆ ದಲಿತರು ಕೈಕಟ್ಟಿ ಕೂರುವುದಿಲ್ಲ ಎಂದು ನಗರದ ಮಾಜಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಅಜಯ್ ಸಿದ್ದರಾಜು ಎಚ್ಚರಿಸಿದರು.

ಸಿದ್ದರಾಮಯ್ಯ ಅವರ ದಕ್ಷ ಆಡಳಿತ ಮತ್ತು ಜನಪ್ರಿಯತೆ ಸಹಿಸಲಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬಾಲಸುಟ್ಟ ಮಂಗನಂತೆ ಆಡುತ್ತಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಕಾಂಗ್ರೆಸ್‌ ಆಡಳಿತ ರಾಜ್ಯದ ಮನೆಮನೆಗೂ ತಲುಪಿರುವುದನ್ನು ಸಹಿಸದ ಸಂವಿಧಾನ ವಿರೋಧಿಗಳು ಸುಳ್ಳು ಹೇಳಿಕೊಂಡು ಬೀದಿ ಸುತ್ತುತ್ತಿದ್ದಾರೆ. ಇವರ ಸುಳ್ಳಿಗೆ ಸೊಪ್ಪಾಕದೆ ದಲಿತ ಸಮುದಾಯ ಎಚ್ಚರ ವಹಿಸಬೇಕೆಂದು ಅಜಯ್ ತಿಳಿಸಿದರು.

ದಲಿತ ವರ್ಗದ ಪರ ಸಿಎಂ ಸಿದ್ದರಾಮಯ್ಯ ಅವರ ಬದ್ಧತೆ ಪ್ರಶ್ನಾತೀತವಾದುದು. ಅವರ ಅಧಿಕಾರಾವಧಿಯಲ್ಲಿ ದಲಿತರ ಶ್ರೇಯೋಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕಾರ್ಯಕ್ರಮಗಳನ್ನು ನೀಡಿದ್ದಾರೆ. ದಲಿತ ಸಮುದಾಯದ ಮೇಲಿನ ಪ್ರಾಮಾಣಿಕ ಕಾಳಜಿಯ ಕಾರಣಕ್ಕಾಗಿಯೇ ರಾಜ್ಯದಲ್ಲಿ ಎಸ್​ಸಿಎಸ್​ಪಿ/ಟಿಎಸ್​​ಪಿ ಕಾಯ್ದೆಯನ್ನು ಜಾರಿಗೆ ತಂದರು. ದಲಿತರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬಿರುವ ಮುಖ್ಯಮಂತ್ರಿಯವರ ಕೈ ಬಲಪಡಿಸುವುದರ ಜೊತೆಗೆ ಅವರ ಬೆನ್ನಿಂದೆ ದಲಿತ ಸಮುದಾಯ ನಿಲ್ಲುತ್ತದೆ ಎಂದು ತಿಳಿಸಿದರು.

ಬಿಜೆಪಿಯವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಮುಖ್ಯಮಂತ್ರಿಗಳಿಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯಬೇಕು ಮತ್ತು ಒಂದು ವೇಳೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ದಲಿತರು ರಾಜ್ಯದಲ್ಲಿ ದಂಗೆ ಹೇಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಿಜೆಪಿ ಮತ್ತು ಜೆಡಿಎಸ್ ಅಧಿಕಾರದ ಅವಧಿಯಲ್ಲಿ ನಡೆದಿರುವ ಮೂಡ ಹಗರಣವನ್ನು ಸಿದ್ದರಾಮಯ್ಯನವರ ತಲೆಗೆ ಕಟ್ಟಲು ಪ್ರಯತ್ನಿಸುತ್ತಿದ್ದಾರೆ. ಅವರು ನಡೆಸುತ್ತಿರುವ ಪಾದಯಾತ್ರೆ ಕೇವಲ ಫೋಟೋಶೂಟ್ ಮತ್ತು ಸೆಲ್ಫಿ ತೆಗೆದುಕೊಳ್ಳಲು ನಡೆಯುತ್ತಿರುವ ಹೋರಾಟವೇ ಹೊರತು ಬೇರೇನಿಲ್ಲ ಎಂದು ತಿಳಿಸಿದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

3 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

4 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

5 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

5 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

6 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

8 hours ago