ಮೈಸೂರು

ಸಿದ್ದರಾಮಯ್ಯರನ್ನು ಮುಟ್ಟಿದರೆ ದಲಿತರು ದಂಗೆ ಹೇಳುತ್ತಾರೆ: ಅಜಯ್ ಸಿದ್ದರಾಜು

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತವನ್ನು ವಿರೋಧ ಮಾಡಲು ಯಾವ ವಿಷಯವೂ ಇಲ್ಲದೆ ಬಿಜೆಪಿ ಮತ್ತು ಜೆಡಿಎಸ್ ಮೂಡಾ ಹಗರಣ ಸೃಷ್ಟಿಸಿ ಸಿಎಂ ವಿರುದ್ಧ ಇಲ್ಲಾಸಲ್ಲದ ಆರೋಪ ಮಾಡಿದರೆ ದಲಿತರು ಕೈಕಟ್ಟಿ ಕೂರುವುದಿಲ್ಲ ಎಂದು ನಗರದ ಮಾಜಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಅಜಯ್ ಸಿದ್ದರಾಜು ಎಚ್ಚರಿಸಿದರು.

ಸಿದ್ದರಾಮಯ್ಯ ಅವರ ದಕ್ಷ ಆಡಳಿತ ಮತ್ತು ಜನಪ್ರಿಯತೆ ಸಹಿಸಲಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬಾಲಸುಟ್ಟ ಮಂಗನಂತೆ ಆಡುತ್ತಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಕಾಂಗ್ರೆಸ್‌ ಆಡಳಿತ ರಾಜ್ಯದ ಮನೆಮನೆಗೂ ತಲುಪಿರುವುದನ್ನು ಸಹಿಸದ ಸಂವಿಧಾನ ವಿರೋಧಿಗಳು ಸುಳ್ಳು ಹೇಳಿಕೊಂಡು ಬೀದಿ ಸುತ್ತುತ್ತಿದ್ದಾರೆ. ಇವರ ಸುಳ್ಳಿಗೆ ಸೊಪ್ಪಾಕದೆ ದಲಿತ ಸಮುದಾಯ ಎಚ್ಚರ ವಹಿಸಬೇಕೆಂದು ಅಜಯ್ ತಿಳಿಸಿದರು.

ದಲಿತ ವರ್ಗದ ಪರ ಸಿಎಂ ಸಿದ್ದರಾಮಯ್ಯ ಅವರ ಬದ್ಧತೆ ಪ್ರಶ್ನಾತೀತವಾದುದು. ಅವರ ಅಧಿಕಾರಾವಧಿಯಲ್ಲಿ ದಲಿತರ ಶ್ರೇಯೋಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕಾರ್ಯಕ್ರಮಗಳನ್ನು ನೀಡಿದ್ದಾರೆ. ದಲಿತ ಸಮುದಾಯದ ಮೇಲಿನ ಪ್ರಾಮಾಣಿಕ ಕಾಳಜಿಯ ಕಾರಣಕ್ಕಾಗಿಯೇ ರಾಜ್ಯದಲ್ಲಿ ಎಸ್​ಸಿಎಸ್​ಪಿ/ಟಿಎಸ್​​ಪಿ ಕಾಯ್ದೆಯನ್ನು ಜಾರಿಗೆ ತಂದರು. ದಲಿತರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬಿರುವ ಮುಖ್ಯಮಂತ್ರಿಯವರ ಕೈ ಬಲಪಡಿಸುವುದರ ಜೊತೆಗೆ ಅವರ ಬೆನ್ನಿಂದೆ ದಲಿತ ಸಮುದಾಯ ನಿಲ್ಲುತ್ತದೆ ಎಂದು ತಿಳಿಸಿದರು.

ಬಿಜೆಪಿಯವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಮುಖ್ಯಮಂತ್ರಿಗಳಿಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯಬೇಕು ಮತ್ತು ಒಂದು ವೇಳೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ದಲಿತರು ರಾಜ್ಯದಲ್ಲಿ ದಂಗೆ ಹೇಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಿಜೆಪಿ ಮತ್ತು ಜೆಡಿಎಸ್ ಅಧಿಕಾರದ ಅವಧಿಯಲ್ಲಿ ನಡೆದಿರುವ ಮೂಡ ಹಗರಣವನ್ನು ಸಿದ್ದರಾಮಯ್ಯನವರ ತಲೆಗೆ ಕಟ್ಟಲು ಪ್ರಯತ್ನಿಸುತ್ತಿದ್ದಾರೆ. ಅವರು ನಡೆಸುತ್ತಿರುವ ಪಾದಯಾತ್ರೆ ಕೇವಲ ಫೋಟೋಶೂಟ್ ಮತ್ತು ಸೆಲ್ಫಿ ತೆಗೆದುಕೊಳ್ಳಲು ನಡೆಯುತ್ತಿರುವ ಹೋರಾಟವೇ ಹೊರತು ಬೇರೇನಿಲ್ಲ ಎಂದು ತಿಳಿಸಿದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago