ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಭ್ರಷ್ಟಾಚಾರಗಳ ಕುರಿತು ಸದನದಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡದೇ ಓಡಿಹೋದ ರಣಹೇಡಿ ಸಿದ್ದರಾಮಯ್ಯ. ಸಿಎಂ ಅವರಿಗೆ ನಿಜವಾಗಿಯೂ ತಾಕತ್ ಇದ್ದರೆ ಬಿಜೆಪಿ ಬಗೆಗಿನ ಭ್ರಷ್ಟಾಚಾರ ಹಗರಣಗಳನ್ನು ಬಿಚ್ಚಿಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸವಾಲೆಸೆದರು.
ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಂದ ಆಯೋಜಿಸಿದ್ದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡದೇ ಓಡಿಹೋದ ರಣಹೇಡಿ ಸಿಎಂ ಸಿದ್ದರಾಮಯ್ಯ. ನಮ್ಮದು ಸಿದ್ದರಾಮಯ್ಯ ವಿರುದ್ಧದ ಹೋರಾಟವಲ್ಲ, ಭ್ರಷ್ಟ ಸಿಎಂ ವಿರುದ್ಧದ ಹೋರಾಟವಾಗಿದೆ. ನಾವು ಅಧಿಕಾರದ ಆಸೆಗಾಗಿ ಮಾಡುತ್ತಿರುವ ಹೋರಾಟವಲ್ಲ. ಬದಲಾಗಿ ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಮಾಡುತ್ತಿರುವ ಹೋರಾಟವಾಗಿದೆ ಎಂದು ಆಕ್ರೋಶ ಹೊರ ಹಾಕಿದರು.
ಬಡವರ ಕಲ್ಯಾಣಕ್ಕೆ ಸಹಾಯಕವಾಗದ ದರಿದ್ರ ಸರ್ಕಾರ ಇದು. ರಾಜ್ಯದ ಜನರ ಪಾಲಿಗೆ ಈ ಸರ್ಕಾರ ಬದುಕಿದ್ದು ಸತ್ತಂತಿದೆ. ವಿರೋಧ ಪಕ್ಷಗಳು ಪ್ರಶ್ನಿಸಿದರೇ ಅವರ ಧನಿಯನ್ನು ಹತ್ತಿಕ್ಕುವ ಕೆಲಸ ಮಾಡಲು ಈ ಸರ್ಕಾರ ಮುಂದಾಗಿದೆ. ನಿಮ್ಮ ಭ್ರಷ್ಟಾಚಾರ ಆಡಳಿತಕ್ಕೆ ಬಹುಪರಾಕ್ ಹೇಳಿಕೊಂಡು ಜೊತೆಯಲ್ಲಿರಬೇಕಾ ಎಂದು ಬಿಬೈವಿ ಖಾರವಾಗಿ ಪ್ರಶ್ನಸಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…