ಮೈಸೂರು

ಪಕ್ಷ ಸೂಚನೆ ನೀಡಿದರೆ ಮಂಡ್ಯ ಪ್ರಚಾರದಲ್ಲಿ ಭಾಗಿ : ಸುಮಲತಾ ಅಂಬರೀಷ್‌

ಮೈಸೂರು : ಪಕ್ಷ ಯಾವಾಗ ಪ್ಲಾನ್‌ ಮಾಡಿ ಹೇಳುತ್ತಾರೋ ಆಗ ಮಂಡ್ಯ ಪ್ರಚಾರಕ್ಕೆ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್‌ ಹೇಳಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಇನ್ನೂ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಪ್ರಚಾರಕ್ಕೆ ಹೋಗದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷ ಎಲ್ಲಿ ಹೋಗಲು ಸೂಚನೆ ನೀಡುತ್ತದೆ ಅಲ್ಲಿಗೆ ಹೋಗಿ ಪ್ರಚಾರ ಮಾಡುತ್ತಿದ್ದೇನೆ. ಮಂಡ್ಯ ಕ್ಷೇತ್ರದ ಪ್ರಚಾರದ ಕುರಿತಾಗಿ ಪಕ್ಷ ಹೇಳಿದರೆ ಹೋಗಿ ಪ್ರಚಾರ ಕಾರ್ಯ ಮಾಡುತ್ತೇನೆ ಎಂದರು.

ಗೆದ್ದ ಕ್ಷೇತ್ರ ಬಿಟ್ಟುಕೊಟ್ಟಿದ್ದಕ್ಕಿಂತ ಬೆಂಬಲ ಬೇಕಾ : ಕುಮಾರಸ್ವಾಮಿ ಅವರಿಗೆ ಬೆಂಬಲದ ಬಗ್ಗೆ ಮಾತನಾಡಿದ ಅವರು, ಹೆಚ್‌.ಡಿ.ಕುಮಾರಸ್ವಾಮಿ ನನ್ನ ಮನೆಗೆ ಬಂದಿ ಬೆಂಬಲ ನೀಡುವಂತೆ ಕೇಳಿದ ಬಳಿಕ ನಾನು ಗೆದ್ದಂತ ಕ್ಷೇತ್ರವನ್ನು ಬಿಟ್ಟು ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಹೇಳಿದ್ದೆ. ಇದಕ್ಕಿಂತ ದೊಟ್ಟ ಬೆಂಬಲ ಬೇಕಾ?

ಒಂದು ವೇಳೆ ಹಠಕ್ಕೆ ಬಿದ್ದು ಚುನಾವಣೆಗೆ ಪಕ್ಷೇತರವಾಗಿ ನಾನೇ ನಿಂತಿದ್ದರೆ, ಹೆಚ್ಚುಕಮ್ಮಿ ಅಗುತ್ತಿತ್ತು. ಅದನ್ನು ಮಾಡಿಲ್ಲ ಅಂದಮೇಲೆ ಪ್ರಚಾರಕ್ಕಿಂತ ಹೆಚ್ಚಿನ ಬೆಂಬಲ ನೀಡಿದಂತೆ ಅಲ್ಲವೇ? ಎಂದು ಪ್ರಶ್ನಿಸಿದರು.

ನನ್ನ ಪ್ರಚಾರಕ್ಕೆ ದರ್ಶನನ್ನು ಕರೆದಿರಲಿಲ್ಲ! : ಇನ್ನು ನಟ ದರ್ಶನ್‌ ಮಳವಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಮಂಡ್ಯದಲ್ಲಿ ಪ್ರಚಾರ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,  ಕಳೆದ ಲೋಕಸಭಾ ಚುನಾವಣೆ ವೇಳೆ ದರ್ಶನ್‌ ಅವರನ್ನು ನಾನು ಪ್ರಚಾರಕ್ಕೆ ಕರೆದಿಲ್ಲ. ಚುನಾವಣೆಯ ಸಂದರ್ಭದಲ್ಲಿ ದರ್ಶನ್‌ ಅವರೇ ಬಂದು ನಿಮ್ಮ ಪರವಾಗಿ ನಿಲ್ಲುತ್ತೇನೆ ಎಂದು ಹೇಳಿ ಬಂದಿದ್ದರು.

ಹೀಗಾಗಿ ಪ್ರಚಾರಕ್ಕೆ ಸಂಬಂಧಪಟ್ಟಂತೆ ದರ್ಶನ್‌ ಅವರಿಗೆ ಯಾವುದೇ ಮಾರ್ಗದರ್ಶನ ನಾನು ನೀಡುವುದಿಲ್ಲ ಹಾಗೂ ನೀಡಿಲ್ಲ. ಅದು ನನಗೆ ಸಂಬಂಧವೇ ಇಲ್ಲ. ದರ್ಶನ್‌ ಯಾವುದೇ ಒಂದು ಪಕ್ಷದ ಪರ ನಿಂತಿಲ್ಲ. ಅವರು ವ್ಯಕ್ತಿಪರ ಪ್ರಚಾರಕ್ಕೆ ಹೋಗುತ್ತಿದ್ದಾರೆ. ಅವರಿಗೆ ಬೇಕಾದವರಿಗೆ ಪ್ರಚಾರ ಮಾಡುವ ಹಕ್ಕು ಅವರಿಗೆ ಇದೆ ಎಂದು ಸುಮಲತಾ ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನಾಗೇಂದ್ರ, ಶಾಸಕ ಶ್ರೀವತ್ಸ, ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

21 mins ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

27 mins ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

5 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

5 hours ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

5 hours ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

5 hours ago