ಮೈಸೂರು

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ ವಾರ್ನಿಂಗ್ ನೀಡಲಾಗಿದೆ. ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ಈ ರೀತಿಯಲ್ಲಿ ಡಂಗುರ ಭಾರಿಸಿ ಎಚ್ಚರಿಕೆ ನೀಡಲಾಗಿದೆ.

ಗ್ರಾಮ ದೇವತೆ ಜಾತ್ರೆ ವೇಳೆ ಯಾವುದೇ ರೀತಿಯ ವಿಡಿಯೋ ಮಾಡಿದ್ರೆ ದಂಡ ಫಿಕ್ಸ್ ಮಾಡಿ ಯಜಮಾನರುಗಳು ಫಾರ್ಮಾನು ಹೊರಡಿಸಿದ್ದಾರೆ. ಮಂಗಳವಾರದಿಂದ (ಫೆ10) ಮೂರು ದಿನಗಳ ಕಾಲ ಗೋಳೂರು ಗ್ರಾಮದಲ್ಲಿ ಗ್ರಾಮ ದೇವತೆ ಜಾತ್ರೆ, ಅಲ್ಲಿ ಹೆಣ್ಣು ಮಕ್ಕಳ ವಿಡಿಯೋ ತೆಗೆಯುವುದು ಅಥವಾ ಕುಡಿದು ಗಲಾಟೆ ಮಾಡುವ ವಿಚಾರದಲ್ಲಿ ನಿರ್ಬಂಧ ವಿಧಿಸಿ ಗ್ರಾಮದ ನಿವಾಸಿ ಚಕ್ರಜವರ ಎಂಬುವರ ಮೂಲಕ ತಮಟೆ ಭಾರಿಸಿ ಗ್ರಾಮದಲ್ಲಿ ಡಂಗುರ ಸಾರಿಸಿದ್ದಾರೆ.

30 ದಿನಗಳವರೆಗೆ ಗ್ರಾಮದಲ್ಲಿ ಮಾಂಸಾಹಾರಿ ಊಟ ಹಾಗೂ ಒಗ್ಗರಣೆ ನಿಷೇಧ..!
ಸಾಕಷ್ಟು ವರ್ಷಗಳಿಂದಲೂ ಗ್ರಾಮ ದೇವತೆ ಮಾರಮ್ಮ ಹಬ್ಬವನ್ನು ಗ್ರಾಮದಲ್ಲಿ ಕಟ್ಟುನಿಟ್ಟಾಗಿ ಆಚರಿಸಲಾಗುತ್ತಿದೆ. ಹಬ್ಬ ಒಂದು ತಿಂಗಳು ಬಾಕಿ ಇರುವಾಗಲೇ ಗ್ರಾಮದ ಯಾವುದೇ ಜನಾಂಗದ ಬೀದಿಯ ಮನೆಗಳಲ್ಲಿ ಒಗ್ಗರಣೆ ಹಾಕುವಂತಿಲ್ಲ. ಮಾಂಸಾಹಾರಿ ಊಟವನ್ನು ಸೇವಿಸುವಂತಿಲ್ಲ ಇದು ತಾತ ಮುತ್ತಾತರ ಕಾಲದಿಂದಲೂ ನಡೆದು ಬಂದಿರುವ ಸಾಂಪ್ರದಾಯವಾಗಿದೆ ಎನ್ನುತ್ತಾರೆ ಗ್ರಾಮದ ಯಜಮಾನ ಮುದ್ದು ಮಾದಶೆಟ್ಟಿ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago