ಮೈಸೂರು: ನನ್ನ ಪೂರ್ವಜರಂತೆ ನಾನು ಕೂಡ ಪ್ರಜೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ಮಾಡಿದ್ದೇನೆ ಎಂದು ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೇಳಿದರು.
ಭಾನುವಾರ ಮಹಾರಾಜ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪರೋಕ್ಷವಾಗಿ ತೀರುಗೇಟು ನೀಡಿದರು.
ನನ್ನ ಪೂರ್ವಿಕರು ಅರಮನೆಯಲ್ಲಿ ಆಡಳಿತ ನಡೆಸುತ್ತಿದ್ದಾಗ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದರು. ನಾನು ಅರಮನೆಯಲ್ಲಿ ಹುಟ್ಟಿದರು ಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿ ಜನರ ಮಧ್ಯೆಯೇ ಬೆಳೆದಿದ್ದೇನೆ. ಚಾಮುಂಡೇಶ್ವರಿ ರಥವನ್ನು ಮೈಸೂರಿನ ಒಡೆಯರ್ಗಳು ಎಳೆದಂತೆ, ಈಗ ದೇಶದ ರಥವನ್ನು ಪ್ರಧಾನಿ ಮೋದಿಯವರೊಂದಿಗೆ ಭಾರತ ಮಾತೆಯ ರಥವನ್ನು ಮುನ್ನಡೆಸುತ್ತೇನೆ ಎಂದು ಹೇಳಿದರು.
ನರೇಂದ್ರ ಮೋದಿಯವರು ಭಾರತೀಯ ಮೂಲದ ಯೋಗವನ್ನು ಜಗತ್ತಿಗೆ ಪರಿಚಯಿಸಿದ ಫಲವಾಗಿ ಇಂದು ಯೋಗ ಅಂತರಾಷ್ಟ್ರೀಯ ಮನ್ನಣೆ ಗಳಿಸಿದೆ. ಈ ನಿಟ್ಟಿ ಮೋದಿಯವರು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಕಾಪಾಡಿದ್ದಾರೆ ಎಂದು ಪ್ರತಿಪಾದಿಸಿದರು.
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…