ಮೈಸೂರು

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆದಿದೆ ಎನ್ನಲಾದ ಆರೋಪದ ಕುರಿತು ಉಪವಿಭಾಗಾಧಿಕಾರಿಗಳು ಬುಧವಾರದಿಂದ ತನಿಖೆ ಆರಂಭಿಸಿದ್ದಾರೆ.

ದೇವಾಲಯದ ಆಕ್ರಮಗಳ ಕುರಿತು ಅಪರ ಜಿಲ್ಲಾಧಿಕಾರಿಗಳಿಗೆ ಬಂದ ದೂರಿನ ಅನ್ವಯ ಈ ತನಿಖೆ ಆರಂಭಿಸಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಇಲ್ಲಿಂದ ವರ್ಗಾವಣೆಯಾಗಿದ್ದ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ ಕುಮಾರ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಹುದ್ದೆಯಲ್ಲಿ ಮುಂದುವರಿದಿರುವಂತೆಯೇ ಅವರ ಅಕ್ರಮಗಳ ಕುರಿತು ಈ ತನಿಖೆ ಪ್ರಾರಂಭವಾಗಿದೆ.

ಇದನ್ನೂ ಓದಿ:-ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಬುಧವಾರ ದೇವಾಲಯದ ಕಾರ್ಯಾಲಯಕ್ಕೆ ದಿಢೀರ್ ಆಗಮಿಸಿದ ಉಪವಿಭಾಗಾಧಿಕಾರಿ ಆಶಪ್ಪ ಪೂಜಾರ್ ಹಾಗೂ ನಂಜನಗೂಡು ತಹಸಿಲ್ದಾರ್ ಶಿವಕುಮಾರ್ ಕ್ಯಾಸನೂರು ಅವರ ನೇತೃತ್ವದ ಅಧಿಕಾರಿಗಳ ತಂಡ ದೇವಾಲಯದ ಅಧಿಕಾರಿಗಳ ಮೇಲೆ ಬಂದಿರುವ ದೂರಿನ ಸಮಗ್ರ ತನಿಖೆಗೆ ಮುಂದಾಗಿದೆ.

ದೇವಾಲಯದಲ್ಲಿ ಕಾಮಗಾರಿಗಳನ್ನೇ ನಡೆಸದೇ ಬಿಲ್ ಮಾಡಲಾಗಿದೆ. ಒಂದೇ ಕಾಮಗಾರಿಯನ್ನು ತುಂಡು ತುಂಡಾಗಿಸಿ ಪತ್ರಿಕಾ ಪ್ರಕಟಣೆಯನ್ನೇ ನೀಡದೆ ತಮಗೆ ಬೇಕಾದವರಿಗೆ ತುಂಡು ಕಾಮಗಾರಿ ನೀಡಿ ಹಣ ಗುಳುಂ ಮಾಡಲಾಗಿದೆ. ತುಮಕೂರಿನವರ ಹೆಸರಲ್ಲಿ ಈ ರೀತಿ ಕೋಟ್ಯಂತರ ರೂ.ಗಳನ್ನು ದೇವಾಲಯಕ್ಕೆ ವಂಚಿಸಲಾಗಿದೆ. ದೇವಾಲಯದ ನೌಕರರಿಗೆ ನೀಡಿರುವ ತುಟ್ಟಿ ಭತ್ಯೆಯಲ್ಲೂ ಅಕ್ರಮಗಳಾಗಿವೆ. ವಾಹನ ಶುಲ್ಕ ವಸೂಲಿಯಲ್ಲಿ ಕೋಟ್ಯಂತರ ರೂ. ಲೂಟಿ ಮಾಡಲಾಗಿದೆ ಎಂಬ ದುರುಗಳು ಅಪರ ಜಿಲ್ಲಾಧಿಕಾರಿಗಳಿಗೆ ಬಂದಿದ್ದು, ಈ ದೂರಿನ ಸತ್ಯಾಸತ್ಯತೆ ತಿಳಿಯಲು ಈ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

8 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

11 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

12 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

12 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

12 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

12 hours ago