ಮೈಸೂರು

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆದಿದೆ ಎನ್ನಲಾದ ಆರೋಪದ ಕುರಿತು ಉಪವಿಭಾಗಾಧಿಕಾರಿಗಳು ಬುಧವಾರದಿಂದ ತನಿಖೆ ಆರಂಭಿಸಿದ್ದಾರೆ.

ದೇವಾಲಯದ ಆಕ್ರಮಗಳ ಕುರಿತು ಅಪರ ಜಿಲ್ಲಾಧಿಕಾರಿಗಳಿಗೆ ಬಂದ ದೂರಿನ ಅನ್ವಯ ಈ ತನಿಖೆ ಆರಂಭಿಸಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಇಲ್ಲಿಂದ ವರ್ಗಾವಣೆಯಾಗಿದ್ದ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ ಕುಮಾರ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಹುದ್ದೆಯಲ್ಲಿ ಮುಂದುವರಿದಿರುವಂತೆಯೇ ಅವರ ಅಕ್ರಮಗಳ ಕುರಿತು ಈ ತನಿಖೆ ಪ್ರಾರಂಭವಾಗಿದೆ.

ಇದನ್ನೂ ಓದಿ:-ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಬುಧವಾರ ದೇವಾಲಯದ ಕಾರ್ಯಾಲಯಕ್ಕೆ ದಿಢೀರ್ ಆಗಮಿಸಿದ ಉಪವಿಭಾಗಾಧಿಕಾರಿ ಆಶಪ್ಪ ಪೂಜಾರ್ ಹಾಗೂ ನಂಜನಗೂಡು ತಹಸಿಲ್ದಾರ್ ಶಿವಕುಮಾರ್ ಕ್ಯಾಸನೂರು ಅವರ ನೇತೃತ್ವದ ಅಧಿಕಾರಿಗಳ ತಂಡ ದೇವಾಲಯದ ಅಧಿಕಾರಿಗಳ ಮೇಲೆ ಬಂದಿರುವ ದೂರಿನ ಸಮಗ್ರ ತನಿಖೆಗೆ ಮುಂದಾಗಿದೆ.

ದೇವಾಲಯದಲ್ಲಿ ಕಾಮಗಾರಿಗಳನ್ನೇ ನಡೆಸದೇ ಬಿಲ್ ಮಾಡಲಾಗಿದೆ. ಒಂದೇ ಕಾಮಗಾರಿಯನ್ನು ತುಂಡು ತುಂಡಾಗಿಸಿ ಪತ್ರಿಕಾ ಪ್ರಕಟಣೆಯನ್ನೇ ನೀಡದೆ ತಮಗೆ ಬೇಕಾದವರಿಗೆ ತುಂಡು ಕಾಮಗಾರಿ ನೀಡಿ ಹಣ ಗುಳುಂ ಮಾಡಲಾಗಿದೆ. ತುಮಕೂರಿನವರ ಹೆಸರಲ್ಲಿ ಈ ರೀತಿ ಕೋಟ್ಯಂತರ ರೂ.ಗಳನ್ನು ದೇವಾಲಯಕ್ಕೆ ವಂಚಿಸಲಾಗಿದೆ. ದೇವಾಲಯದ ನೌಕರರಿಗೆ ನೀಡಿರುವ ತುಟ್ಟಿ ಭತ್ಯೆಯಲ್ಲೂ ಅಕ್ರಮಗಳಾಗಿವೆ. ವಾಹನ ಶುಲ್ಕ ವಸೂಲಿಯಲ್ಲಿ ಕೋಟ್ಯಂತರ ರೂ. ಲೂಟಿ ಮಾಡಲಾಗಿದೆ ಎಂಬ ದುರುಗಳು ಅಪರ ಜಿಲ್ಲಾಧಿಕಾರಿಗಳಿಗೆ ಬಂದಿದ್ದು, ಈ ದೂರಿನ ಸತ್ಯಾಸತ್ಯತೆ ತಿಳಿಯಲು ಈ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

5 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

6 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

6 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

6 hours ago