ಮೈಸೂರು

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆದಿದೆ ಎನ್ನಲಾದ ಆರೋಪದ ಕುರಿತು ಉಪವಿಭಾಗಾಧಿಕಾರಿಗಳು ಬುಧವಾರದಿಂದ ತನಿಖೆ ಆರಂಭಿಸಿದ್ದಾರೆ.

ದೇವಾಲಯದ ಆಕ್ರಮಗಳ ಕುರಿತು ಅಪರ ಜಿಲ್ಲಾಧಿಕಾರಿಗಳಿಗೆ ಬಂದ ದೂರಿನ ಅನ್ವಯ ಈ ತನಿಖೆ ಆರಂಭಿಸಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಇಲ್ಲಿಂದ ವರ್ಗಾವಣೆಯಾಗಿದ್ದ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ ಕುಮಾರ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಹುದ್ದೆಯಲ್ಲಿ ಮುಂದುವರಿದಿರುವಂತೆಯೇ ಅವರ ಅಕ್ರಮಗಳ ಕುರಿತು ಈ ತನಿಖೆ ಪ್ರಾರಂಭವಾಗಿದೆ.

ಇದನ್ನೂ ಓದಿ:-ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಬುಧವಾರ ದೇವಾಲಯದ ಕಾರ್ಯಾಲಯಕ್ಕೆ ದಿಢೀರ್ ಆಗಮಿಸಿದ ಉಪವಿಭಾಗಾಧಿಕಾರಿ ಆಶಪ್ಪ ಪೂಜಾರ್ ಹಾಗೂ ನಂಜನಗೂಡು ತಹಸಿಲ್ದಾರ್ ಶಿವಕುಮಾರ್ ಕ್ಯಾಸನೂರು ಅವರ ನೇತೃತ್ವದ ಅಧಿಕಾರಿಗಳ ತಂಡ ದೇವಾಲಯದ ಅಧಿಕಾರಿಗಳ ಮೇಲೆ ಬಂದಿರುವ ದೂರಿನ ಸಮಗ್ರ ತನಿಖೆಗೆ ಮುಂದಾಗಿದೆ.

ದೇವಾಲಯದಲ್ಲಿ ಕಾಮಗಾರಿಗಳನ್ನೇ ನಡೆಸದೇ ಬಿಲ್ ಮಾಡಲಾಗಿದೆ. ಒಂದೇ ಕಾಮಗಾರಿಯನ್ನು ತುಂಡು ತುಂಡಾಗಿಸಿ ಪತ್ರಿಕಾ ಪ್ರಕಟಣೆಯನ್ನೇ ನೀಡದೆ ತಮಗೆ ಬೇಕಾದವರಿಗೆ ತುಂಡು ಕಾಮಗಾರಿ ನೀಡಿ ಹಣ ಗುಳುಂ ಮಾಡಲಾಗಿದೆ. ತುಮಕೂರಿನವರ ಹೆಸರಲ್ಲಿ ಈ ರೀತಿ ಕೋಟ್ಯಂತರ ರೂ.ಗಳನ್ನು ದೇವಾಲಯಕ್ಕೆ ವಂಚಿಸಲಾಗಿದೆ. ದೇವಾಲಯದ ನೌಕರರಿಗೆ ನೀಡಿರುವ ತುಟ್ಟಿ ಭತ್ಯೆಯಲ್ಲೂ ಅಕ್ರಮಗಳಾಗಿವೆ. ವಾಹನ ಶುಲ್ಕ ವಸೂಲಿಯಲ್ಲಿ ಕೋಟ್ಯಂತರ ರೂ. ಲೂಟಿ ಮಾಡಲಾಗಿದೆ ಎಂಬ ದುರುಗಳು ಅಪರ ಜಿಲ್ಲಾಧಿಕಾರಿಗಳಿಗೆ ಬಂದಿದ್ದು, ಈ ದೂರಿನ ಸತ್ಯಾಸತ್ಯತೆ ತಿಳಿಯಲು ಈ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

2 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

3 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

4 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

4 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

4 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

5 hours ago