ಮೈಸೂರು

ಅಕ್ರಮ ಆಸ್ತಿ ಗಳಿಕೆ ಆರೋಪ : ಮೈಸೂರಿನ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ

ಮೈಸೂರು : ಅಕ್ರಮವಾಗಿ ಆಸ್ತಿ ಸಂಪಾದಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಎಂಟು ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಕರ್ನಾಟಕ ಲೋಕಾಯುಕ್ತರು ಬುಧವಾರ ಮುಂಜಾನೆ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ. ಅದರಲ್ಲಿ ಮೈಸೂರಿನ ಇಬ್ಬರು ಅಧಿಕಾರಿಗಳ ನಿವಾಸದ ಮೇಲೂ ದಾಳಿ ನಡೆದಿದೆ.

ಅಧಿಕಾರಿಗಳು ತಮ್ಮ ಆದಾಯದ ಮೂಲಗಳಿಗಿಂತ ಹೆಚ್ಚು ಆಸ್ತಿಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿ ಈ ದಾಳಿ ನಡೆಸಲಾಗಿದೆ. ದಾಳಿಗೊಳಗಾದವರಲ್ಲಿ ಮೈಸೂರು ನಗರ ಪಾಲಿಕೆಯ ವಲಯ ಕಚೇರಿ ೫ ರ ಉಸ್ತುವಾರಿ ಸಹಾಯಕ ಆಯುಕ್ತ ಬಿ. ವೆಂಕಟರಾಮ್ ಕೂಡ ಸೇರಿದ್ದಾರೆ, ಅವರು ಎಂಸಿಸಿ ಉದ್ಯೋಗಿಗಳ ಸಂಘದ ಅಧ್ಯಕ್ಷರೂ ಆಗಿದ್ದಾರೆ.

ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ನೇತೃತ್ವದ ಲೋಕಾಯುಕ್ತ ಅಧಿಕಾರಿಗಳ ತಂಡವು ಬುಧವಾರ ಬೆಳಿಗ್ಗೆ ೭ ಗಂಟೆ ಸುಮಾರಿಗೆ ಖಾಸಗಿ ವಾಹನಗಳಲ್ಲಿ ಕೆ.ಸಿ. ಬಡಾವಣೆಯಲ್ಲಿರುವ ವೆಂಕಟರಾಮ್ ಅವರ ನಿವಾಸಕ್ಕೆ ಆಗಮಿಸಿತು.

ಮಾಧ್ಯಮದವರು ಮತ್ತು ಸಾರ್ವಜನಿಕರನ್ನು ಹೊರಗಿಟ್ಟು ಪ್ರವೇಶ ದ್ವಾರಗಳನ್ನು ಮುಚ್ಚಿ, ದಾಖಲೆಗಳ ಪರಿಶೀಲನೆ ಸೇರಿದಂತೆ ವ್ಯಾಪಕ ಶೋಧ ನಡೆಸಿತು. ವೆಂಕಟರಾಮ್ ಇತ್ತೀಚೆಗೆ ನಾಗರಿಕ ಕಾರ್ಮಿಕರಿಗೆ ೭ನೇ ವೇತನ ಆಯೋಗದ ಸವಲತ್ತುಗಳನ್ನು ಪೂರ್ಣವಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಎಂಸಿಸಿ ನೌಕರರ ಸಂಘವು ನಡೆಸಿದ್ದ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.ಆರೋಪಿಗಳ ಸಂಬಂಧಿಕರ ನಿವಾಸಗಳು, ಕಚೇರಿಗಳು ಮತ್ತು ಆವರಣಗಳನ್ನು ಕೂಡ ತಂಡಗಳು ಶೋಧಿಸಿದವು.

ಇದೇ ವೇಳೆ ಮಡಿಕೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರ ತಂಡ ಕೌಶಲ ಅಭಿವೃದ್ಧಿ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎಂ.ಮಂಜುನಾಥ ಸ್ವಾಮಿ ಅವರ ಸಾಥಗಳ್ಳಿಯ ನಿವಾಸ ಹಾಗೂ ಮೈಸೂರು ಮತ್ತು ಮಡಿಕೇರಿಯಲ್ಲಿರುವ ನಿವಾಸಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಯಿತು. ಮಂಜುನಾಥ ಕಳೆದ ತಿಂಗಳಷ್ಟೇ ನಿವೃತ್ತರಾಗಿದ್ದರು.

ಇದೇ ವೇಳೆ ವೆಂಕಟರಾಮು ಅವರ ಜಮೀನು, ಮನೆಯ ದಾಖಲೆಗಳು, ಕಾರು, ದ್ವಿಚಕ್ರ ವಾಹನ, ಚಿನ್ನಾಭರಣ ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮಂಜುನಾಥ್ ಅವರ ನಿವಾಸದಲ್ಲಿ ದೊರೆತ ಸಾಕಷ್ಟು ಆಸ್ತಿಗಳ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

2 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

3 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

10 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

10 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

15 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

15 hours ago