ಮೈಸೂರು

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಜಾಗೃತ ದಳದ ಅಧಿಕಾರಿಗಳು 31 ಪ್ರಕರಣಗಳನ್ನು ದಾಖಲಿಸಿ, 2.17 ಲಕ್ಷ ರೂ.ಗಳ ದಂಡ ವಿಧಿಸಿದ್ದಾರೆ.

ಸೆಸ್ಕ್ ವ್ಯಾಪ್ತಿಯಲ್ಲು ಸಾಮೂಹಿಕ ಕಾರ್ಯಾಚರಣೆ ನಡೆಸಿದ ಸೆಸ್ಕ್ ಜಾಗೃತದಳ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಅನಧಿಕೃತವಾಗಿ ವಿದ್ಯುತ್ ಸಂಪರ್ಕವನ್ನು ಪಡೆಯುವ ಮೂಲಕ ನಿಗಮಕ್ಕೆ ನಷ್ಟ ಉಂಟುಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಸೆಸ್ಕ್‌ ವ್ಯಾಪ್ತಿಯ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಜಾಗೃತದಳದ ವ್ಯಾಪ್ತಿಯ ಅಧಿಕಾರಿ ಮತ್ತು ಸಿಬ್ಬಂದಿ 8 ತಂಡಗಳಾಗಿ, ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿರುವ ಏಕಲವ್ಯನಗರ, ಬಂಬೂಬಜಾರ್, ಇಟ್ಟಿಗೆಗೂಡು ಹಾಗೂ ಇತರೆ ವ್ಯಾಪ್ತಿಯಲ್ಲಿರುವ ವಿವಿಧ ಸ್ಥಾವರಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದರು.

ಇದನ್ನೂ ಓದಿ:-ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ) ಶರಣಮ್ಮ ಎಸ್. ಜಂಗಿನ್, ಸೆಸ್ಕ್‌ ಜಾಗೃತ ದಳದ ಎಸ್ಪಿ ಸವಿತಾ ಹೂಗಾರ್ ಅವರುಗಳ ಮಾರ್ಗದರ್ಶನದಲ್ಲಿ ಸದರಿ ಕಾರ್ಯಾಚರಣೆ ನಡೆಯಿತು.

ಕಾರ್ಯಾಚರಣೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಬಿ.ಎಸ್‌. ಚಂದ್ರಶೇಖರ್, ಪೋಲೀಸ್ ಉಪಾಧೀಕ್ಷಕಿ ಎಂ.ಜೆ.ಪೃಥ್ವಿ, ಸೆಸ್ಕ್ ಜಾಗೃತದಳದ ಪೊಲೀಸ್ ನಿರೀಕ್ಷಕಿ ಎಂ. ಜಯರತ್ನ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಸೈಯದಾ ಕೌಸರ್ ಬೇಗಂ ಇತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

6 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

6 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

6 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

6 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

6 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

9 hours ago