ಮೈಸೂರು

ನಂಜನಗೂಡು| ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಸಾವು

ಶ್ರೀಧರ್ ಆರ್. ಭಟ್

ನಂಜನಗೂಡು: ಯುಗಾದಿ ಹಬ್ಬದ ದಿನ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಸೇವಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಂಡೀಪುರ ರಕ್ಷಿತಾರಣ್ಯದ ಅಂಚಿನಲ್ಲಿರುವ ನಾಗಣಾಪುರ ಕಾಲೋನಿಯಲ್ಲಿ ನಡೆದಿದೆ.

ನಾಗಣಾಪುರ ಆದಿವಾಸಿ ಕಾಲೋನಿಯ 54 ವರ್ಷದ ರಾಜು ಎಂಬಾತನೇ ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ತಾಲ್ಲೂಕಿನಾದ್ಯಂತ ಪೆಟ್ಟಿ ಮತ್ತು ಗಿರಣಿ ಅಂಗಡಿಗಳಲ್ಲಿ ಅನಧಿಕೃತವಾಗಿ ಮಾರಾಟವಾಗುವ ಮದ್ಯ ಸೇವಿಸಿ ಬಲಿಯಾದ ಮೂರನೆಯ ವ್ಯಕ್ತಿ ಈತನಾಗಿದ್ದಾನೆ.

ಕಳೆದ 20 ದಿನಗಳ ಹಿಂದೆ ಇದೇ ಕಾಡಂಚಿನ ಕಾಲೋನಿಯ ಈರೇಗೌಡನ ಹುಂಡಿ ಗ್ರಾಮದ ಚೆನ್ನಪ್ಪ ಹಾಗೂ ಬಳ್ಳೂರು ಹುಂಡಿ ಗ್ರಾಮದ ಮಹದೇವ ಎಂಬುವವರು ಅಕ್ರಮ ಮದ್ಯ ಸೇವಿಸಿ ಬಲಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಈಗ ಮೂರನೇ ಬಲಿಯಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಜನಪ್ರತಿನಿಧಿಗಳು ಮತ್ತು ಅಬಕಾರಿ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಗ್ರಾಮೀಣ ಪ್ರದೇಶದ ಪೆಟ್ಟಿ ಮತ್ತು ಗಿರಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು, ಈ ಬಗ್ಗೆ ಏನೂ ಕ್ರಮ ಕೈಗೊಳ್ಳದೇ ಅಧಿಕಾರಿಗಳು ಜಾಣ ಮೌನ ವಹಿಸಿರುವುದು ಅನೇಕ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

4 mins ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

49 mins ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

58 mins ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

2 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

2 hours ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

3 hours ago