ಶ್ರೀಧರ್ ಆರ್. ಭಟ್
ನಂಜನಗೂಡು: ಯುಗಾದಿ ಹಬ್ಬದ ದಿನ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಸೇವಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಂಡೀಪುರ ರಕ್ಷಿತಾರಣ್ಯದ ಅಂಚಿನಲ್ಲಿರುವ ನಾಗಣಾಪುರ ಕಾಲೋನಿಯಲ್ಲಿ ನಡೆದಿದೆ.
ನಾಗಣಾಪುರ ಆದಿವಾಸಿ ಕಾಲೋನಿಯ 54 ವರ್ಷದ ರಾಜು ಎಂಬಾತನೇ ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ತಾಲ್ಲೂಕಿನಾದ್ಯಂತ ಪೆಟ್ಟಿ ಮತ್ತು ಗಿರಣಿ ಅಂಗಡಿಗಳಲ್ಲಿ ಅನಧಿಕೃತವಾಗಿ ಮಾರಾಟವಾಗುವ ಮದ್ಯ ಸೇವಿಸಿ ಬಲಿಯಾದ ಮೂರನೆಯ ವ್ಯಕ್ತಿ ಈತನಾಗಿದ್ದಾನೆ.
ಕಳೆದ 20 ದಿನಗಳ ಹಿಂದೆ ಇದೇ ಕಾಡಂಚಿನ ಕಾಲೋನಿಯ ಈರೇಗೌಡನ ಹುಂಡಿ ಗ್ರಾಮದ ಚೆನ್ನಪ್ಪ ಹಾಗೂ ಬಳ್ಳೂರು ಹುಂಡಿ ಗ್ರಾಮದ ಮಹದೇವ ಎಂಬುವವರು ಅಕ್ರಮ ಮದ್ಯ ಸೇವಿಸಿ ಬಲಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಈಗ ಮೂರನೇ ಬಲಿಯಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಜನಪ್ರತಿನಿಧಿಗಳು ಮತ್ತು ಅಬಕಾರಿ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಗ್ರಾಮೀಣ ಪ್ರದೇಶದ ಪೆಟ್ಟಿ ಮತ್ತು ಗಿರಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು, ಈ ಬಗ್ಗೆ ಏನೂ ಕ್ರಮ ಕೈಗೊಳ್ಳದೇ ಅಧಿಕಾರಿಗಳು ಜಾಣ ಮೌನ ವಹಿಸಿರುವುದು ಅನೇಕ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…