ಮೈಸೂರು: ವಾರಸುದಾರರಿಲ್ಲದ ಆಸ್ತಿ ಕಬಳಿಸಲು ಸಂಚು ರೂಪಿಸಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದ ಮಾಜಿ ಶಾಸಕರ ಕುಟುಂಬದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಟಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕ ಲೇಟ್ ಶ್ರೀನಿವಾಸ ಅಯ್ಯಂಗಾರ್ ಸೊಸೆ ಲಲಿತಾ ಜಯಗೋಪಾಲ್, ಮೊಮ್ಮಗ ಸುಧೀರ್ ಜಯಗೋಪಾಲ್, ಮೊಮ್ಮಗಳು ಸುಮನ್ ಜಯಗೋಪಾಲ್ ವಿರುದ್ದ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮೂವರು ಮೈಸೂರು ವರುಣಾ ಹೋಬಳಿ ಲಲಿತಾದ್ರಿಪುರ ಗ್ರಾಮದ ಸರ್ವೇ ನಂಬರ್ 206 ರಲ್ಲಿ 3 ಎಕರೆ 4 ಗುಂಟೆ ಜಮೀನಿಗೆ ಸಂಬಂಧಪಟ್ಟಂತೆ ಪೌತಿ ಖಾತೆ ಬದಲಾವಣೆ ಮಾಡಲು ಕೋರಿ 2022 ಏಪ್ರಿಲ್ 24 ರಂದು ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ವಹಿವಾಟಿಗೆ ಆರ್ಟಿಐ ಕಾರ್ಯಕರ್ತ ಬಿ.ಎನ್. ನಾಗೇಂದ್ರ ತಕರಾರು ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧ ಹೆಚ್ಚುವರಿ ತಹಸೀಲ್ದಾರ್ ಎನ್. ವಿಶ್ವನಾಥ್ ವಿಚಾರಣೆ ನಡೆಸಿ, ಈ ಜಮೀನಿನ ಸಂಬಂಧ ಭೂಮಿ ಶಾಖೆಯಲ್ಲಿನ ನಡವಳಿಯನ್ನು ರದ್ದುಪಡಿಸಿ, ರಾಜಸ್ವ ನಿರೀಕ್ಷಕರಿಗೆ ಪೋರ್ಜರಿ ದಾಖಲೆ ಸೃಷ್ಟಿಸಿ ಅಕ್ರಮ ಖಾತೆ ಮಾಡಿಸಿಕೊಳ್ಳಲು ಯತ್ನಿಸಿದವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಅಗತ್ಯ ಕ್ರಮ ವಹಿಸುವಂತೆ ಆದೇಶ ನೀಡಿದ್ದರು. ಅದರಂತೆ ಈ ಮೂವರ ವಿರುದ್ಧ ಕಂದಾಯ ಅಧಿಕಾರಿ ಶಂಕರ್ ಅವರು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…