ಮೈಸೂರು: ವಾರಸುದಾರರಿಲ್ಲದ ಆಸ್ತಿ ಕಬಳಿಸಲು ಸಂಚು ರೂಪಿಸಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದ ಮಾಜಿ ಶಾಸಕರ ಕುಟುಂಬದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಟಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕ ಲೇಟ್ ಶ್ರೀನಿವಾಸ ಅಯ್ಯಂಗಾರ್ ಸೊಸೆ ಲಲಿತಾ ಜಯಗೋಪಾಲ್, ಮೊಮ್ಮಗ ಸುಧೀರ್ ಜಯಗೋಪಾಲ್, ಮೊಮ್ಮಗಳು ಸುಮನ್ ಜಯಗೋಪಾಲ್ ವಿರುದ್ದ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮೂವರು ಮೈಸೂರು ವರುಣಾ ಹೋಬಳಿ ಲಲಿತಾದ್ರಿಪುರ ಗ್ರಾಮದ ಸರ್ವೇ ನಂಬರ್ 206 ರಲ್ಲಿ 3 ಎಕರೆ 4 ಗುಂಟೆ ಜಮೀನಿಗೆ ಸಂಬಂಧಪಟ್ಟಂತೆ ಪೌತಿ ಖಾತೆ ಬದಲಾವಣೆ ಮಾಡಲು ಕೋರಿ 2022 ಏಪ್ರಿಲ್ 24 ರಂದು ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ವಹಿವಾಟಿಗೆ ಆರ್ಟಿಐ ಕಾರ್ಯಕರ್ತ ಬಿ.ಎನ್. ನಾಗೇಂದ್ರ ತಕರಾರು ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧ ಹೆಚ್ಚುವರಿ ತಹಸೀಲ್ದಾರ್ ಎನ್. ವಿಶ್ವನಾಥ್ ವಿಚಾರಣೆ ನಡೆಸಿ, ಈ ಜಮೀನಿನ ಸಂಬಂಧ ಭೂಮಿ ಶಾಖೆಯಲ್ಲಿನ ನಡವಳಿಯನ್ನು ರದ್ದುಪಡಿಸಿ, ರಾಜಸ್ವ ನಿರೀಕ್ಷಕರಿಗೆ ಪೋರ್ಜರಿ ದಾಖಲೆ ಸೃಷ್ಟಿಸಿ ಅಕ್ರಮ ಖಾತೆ ಮಾಡಿಸಿಕೊಳ್ಳಲು ಯತ್ನಿಸಿದವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಅಗತ್ಯ ಕ್ರಮ ವಹಿಸುವಂತೆ ಆದೇಶ ನೀಡಿದ್ದರು. ಅದರಂತೆ ಈ ಮೂವರ ವಿರುದ್ಧ ಕಂದಾಯ ಅಧಿಕಾರಿ ಶಂಕರ್ ಅವರು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…