ಮೈಸೂರು: ವಾರಸುದಾರರಿಲ್ಲದ ಆಸ್ತಿ ಕಬಳಿಸಲು ಸಂಚು ರೂಪಿಸಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದ ಮಾಜಿ ಶಾಸಕರ ಕುಟುಂಬದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಟಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕ ಲೇಟ್ ಶ್ರೀನಿವಾಸ ಅಯ್ಯಂಗಾರ್ ಸೊಸೆ ಲಲಿತಾ ಜಯಗೋಪಾಲ್, ಮೊಮ್ಮಗ ಸುಧೀರ್ ಜಯಗೋಪಾಲ್, ಮೊಮ್ಮಗಳು ಸುಮನ್ ಜಯಗೋಪಾಲ್ ವಿರುದ್ದ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮೂವರು ಮೈಸೂರು ವರುಣಾ ಹೋಬಳಿ ಲಲಿತಾದ್ರಿಪುರ ಗ್ರಾಮದ ಸರ್ವೇ ನಂಬರ್ 206 ರಲ್ಲಿ 3 ಎಕರೆ 4 ಗುಂಟೆ ಜಮೀನಿಗೆ ಸಂಬಂಧಪಟ್ಟಂತೆ ಪೌತಿ ಖಾತೆ ಬದಲಾವಣೆ ಮಾಡಲು ಕೋರಿ 2022 ಏಪ್ರಿಲ್ 24 ರಂದು ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ವಹಿವಾಟಿಗೆ ಆರ್ಟಿಐ ಕಾರ್ಯಕರ್ತ ಬಿ.ಎನ್. ನಾಗೇಂದ್ರ ತಕರಾರು ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧ ಹೆಚ್ಚುವರಿ ತಹಸೀಲ್ದಾರ್ ಎನ್. ವಿಶ್ವನಾಥ್ ವಿಚಾರಣೆ ನಡೆಸಿ, ಈ ಜಮೀನಿನ ಸಂಬಂಧ ಭೂಮಿ ಶಾಖೆಯಲ್ಲಿನ ನಡವಳಿಯನ್ನು ರದ್ದುಪಡಿಸಿ, ರಾಜಸ್ವ ನಿರೀಕ್ಷಕರಿಗೆ ಪೋರ್ಜರಿ ದಾಖಲೆ ಸೃಷ್ಟಿಸಿ ಅಕ್ರಮ ಖಾತೆ ಮಾಡಿಸಿಕೊಳ್ಳಲು ಯತ್ನಿಸಿದವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಅಗತ್ಯ ಕ್ರಮ ವಹಿಸುವಂತೆ ಆದೇಶ ನೀಡಿದ್ದರು. ಅದರಂತೆ ಈ ಮೂವರ ವಿರುದ್ಧ ಕಂದಾಯ ಅಧಿಕಾರಿ ಶಂಕರ್ ಅವರು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…