ಮೈಸೂರು: ವಾರಸುದಾರರಿಲ್ಲದ ಆಸ್ತಿ ಕಬಳಿಸಲು ಸಂಚು ರೂಪಿಸಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದ ಮಾಜಿ ಶಾಸಕರ ಕುಟುಂಬದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಟಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕ ಲೇಟ್ ಶ್ರೀನಿವಾಸ ಅಯ್ಯಂಗಾರ್ ಸೊಸೆ ಲಲಿತಾ ಜಯಗೋಪಾಲ್, ಮೊಮ್ಮಗ ಸುಧೀರ್ ಜಯಗೋಪಾಲ್, ಮೊಮ್ಮಗಳು ಸುಮನ್ ಜಯಗೋಪಾಲ್ ವಿರುದ್ದ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮೂವರು ಮೈಸೂರು ವರುಣಾ ಹೋಬಳಿ ಲಲಿತಾದ್ರಿಪುರ ಗ್ರಾಮದ ಸರ್ವೇ ನಂಬರ್ 206 ರಲ್ಲಿ 3 ಎಕರೆ 4 ಗುಂಟೆ ಜಮೀನಿಗೆ ಸಂಬಂಧಪಟ್ಟಂತೆ ಪೌತಿ ಖಾತೆ ಬದಲಾವಣೆ ಮಾಡಲು ಕೋರಿ 2022 ಏಪ್ರಿಲ್ 24 ರಂದು ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ವಹಿವಾಟಿಗೆ ಆರ್ಟಿಐ ಕಾರ್ಯಕರ್ತ ಬಿ.ಎನ್. ನಾಗೇಂದ್ರ ತಕರಾರು ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧ ಹೆಚ್ಚುವರಿ ತಹಸೀಲ್ದಾರ್ ಎನ್. ವಿಶ್ವನಾಥ್ ವಿಚಾರಣೆ ನಡೆಸಿ, ಈ ಜಮೀನಿನ ಸಂಬಂಧ ಭೂಮಿ ಶಾಖೆಯಲ್ಲಿನ ನಡವಳಿಯನ್ನು ರದ್ದುಪಡಿಸಿ, ರಾಜಸ್ವ ನಿರೀಕ್ಷಕರಿಗೆ ಪೋರ್ಜರಿ ದಾಖಲೆ ಸೃಷ್ಟಿಸಿ ಅಕ್ರಮ ಖಾತೆ ಮಾಡಿಸಿಕೊಳ್ಳಲು ಯತ್ನಿಸಿದವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಅಗತ್ಯ ಕ್ರಮ ವಹಿಸುವಂತೆ ಆದೇಶ ನೀಡಿದ್ದರು. ಅದರಂತೆ ಈ ಮೂವರ ವಿರುದ್ಧ ಕಂದಾಯ ಅಧಿಕಾರಿ ಶಂಕರ್ ಅವರು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…