ತಿ. ನರಸೀಪುರ: ಪತ್ನಿಯ ಜತೆ ಅಕ್ರಮ ಸಂಬಂಧದ ಹಿನ್ನೆಲೆ ವ್ಯಕ್ತಿಯೊಬ್ಬ ಪತ್ನಿಯ ಪ್ರಿಯಕರನ್ನು ನೀರಿಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣವೊಂದು ತಿರಮಕೂಡಲು ಕಾವೇರಿ ನದಿ ಸಮೀಪದ ಬಳಿ ಬುಧವಾರ ರಾತ್ರಿ ನಡೆದಿದೆ.
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಚಂದ್ರು ಎಂಬಾತನೇ ಕೊಲೆಯಾದ ವ್ಯಕ್ತಿ. ಯಳಂದೂರು ತಾಲ್ಲೂಕಿನ ದುಗ್ಗಟ್ಟಿ ಗ್ರಾಮದ ಕೊಟ್ಟೂರಪ್ಪ ಕೊಲೆಗೈದ ವ್ಯಕ್ತಿ.
ಕೊಟ್ಟೂರಪ್ಪನ ಪತ್ನಿ, ಕಾಮಾಕ್ಷಿಯೊಂದಿಗೆ ದೊಡ್ಡಿಂದುವಾಡಿ ಗ್ರಾಮದ ಚಂದ್ರು ಅಕ್ರಮ ಸಂಬಂಧ ಹೊಂದಿದ್ದ. ಕಳೆದ 6 ದಿನಗಳ ಹಿಂದೆ ಕಾಮಾಕ್ಷಿ ಚಂದ್ರು ಜತೆ ತಿ. ನರಸೀಪುರದಲ್ಲಿ ಓಡಾಡುತ್ತಿದ್ದು ಪತಿಗೆ ತಿಳಿದಿದೆ. ಬಳಿಕ ತಿ.ನರಸೀಪುರದ ತಿರುಮಕೂಡಲಿನ ಚೌಡೇಶ್ವರಿ ದೇವಾಲಯದ ಎದುರಿನ ಕಾವೇರಿ ನದಿಗೆ ಹೋಗುವ ಮೆಟ್ಟಿಲುಗಳ ಬಳಿ ಕೊಟ್ಟೂರಪ್ಪ -ಚಂದ್ರ ನಡುವೆ ಗಲಾಟೆಯಾಗಿದೆ. ಈ ವೇಳೆ ಕೊಟ್ಟೂರಪ್ಪ ಚಂದ್ರುವಿಗೆ ಹೊಡೆದು ಒದ್ದು ನೀರಿಗೆ ತಳ್ಳಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ತಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…