ಮೈಸೂರು: ನಾನೊಬ್ಬ ಸರಳ ಸರಳ ವ್ಯಕ್ತಿ ಮತ್ತು ಸದಾ ಜನರ ನಡುವೆ ಇರುವವ ಮತ್ತು ಅವರು ಕರೆ ಮಾಡಿದಾಗೆಲ್ಲ ಕೈಗೆ ಸಿಗುವ ವ್ಯಕ್ತಿಯಾಗಿದ್ದೇನೆ ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ ಹೇಳಿದ್ದಾರೆ.
ನಗರದಲ್ಲಿನ ಕಾರ್ಯಕರ್ತರ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತಾನು ಸರಳ ವ್ಯಕ್ತಿ ಅಂತ ಹೇಳುತ್ತಾ ಹಾಲಿ ಸಂಸದ ಪ್ರತಾಪ್ ಸಿಂಹ ಮೇಲೆ ಪರೋಕ್ಷ ದಾಳಿ ನಡೆಸಿದರು.
ತಮ್ಮ ವಿರುದ್ಧ ಕಾಮೆಂಟ್ ಮಾಡದಂತೆ ಪ್ರತಾಪ್ ಸಿಂಹ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದುಕೊಂಡಿದ್ದಾರೆ, ತಡೆಯಾಜ್ಞೆ ತೆರವುಗೊಳಿಸಿದರೇ ಅವರ ಕೊಳಕು ಮನಸ್ಥೀತಿ ಬಿಚ್ಚಿಡುತ್ತೇನೆ ಎಂದರು.
ಪ್ರತಾಪ್ ಸಿಂಹ ಹೇಸರೇಳದೇ ದಾಳಿ ನಡೆಸಿದ ಲಕ್ಷ್ಮಣ್, ನಾನು ಕಾರಲ್ಲಿ ಓಡಾಡಲ್ಲ, ಜೂಜುಕೋರನಲ್ಲ, ಮದ್ಯವ್ಯಸನಿ ಅಲ್ಲ, ಧೂಮ್ರಪಾನಿಯೂ ಅಲ್ಲ, ರಾತ್ರಿಯ ವ್ಯವಹಾರಗಳು ತನಗಿಲ್ಲ, ಭ್ರಷ್ಟಾಚಾರದ ಹಣದಲ್ಲಿ ರೆಸಾರ್ಟ್ ನಿರ್ಮಾಣದ ಕೆಲಸಕ್ಕೆ ಮುಂದಾಗಿಲ್ಲ, ಮಡಿಕೇರಿಯಲ್ಲಿ ನೂರಾರು ಎಕರೆ ಕಾಫಿ ಪ್ಲಾಂಟೇಷನ್ ತನಗಿಲ್ಲ, ಈಗಲೂ ತಾನು ಬೆಂಗಳೂರಿಗೆ ಟ್ರೈನು ಮತ್ತು ಮಡಿಕೇರಿಗೆ ಬಸ್ಸಲ್ಲಿ ಹೋಗೋದು, ತನ್ನದು ಕ್ಲೀನ್ ಇಮೇಜ್ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.
ತಾನು ಒಕ್ಕಲಿಗ ಅಲ್ಲ ಎನ್ನುವ ಸಂಸದನ ಕೊಳಕು ಮನಸ್ಥಿಯನ್ನು ಜನರ ಮುಂದೆ ಬಿಚ್ಚಿಡಬೇಕಿದೆ, ಅವರೊಂದಿಗೆ ಮಾಧ್ಯಮ ಮುಂದೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ, ಅವರು ದಯವಿಟ್ಟು ಅ ತಡೆಯಾಜ್ಞೆಯನ್ನು ಹಿಂಪಡೆಯಲಿ ಎಂದು ಇದೇ ವೇಳೆ ಲಕ್ಷ್ಮಣ್ ಸವಾಲು ಹಾಕಿದರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…