ಮೈಸೂರು

ಕೆಂಪಿಸಿದ್ದನಹುಂಡಿ ರೈತರ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ತಾತ್ಕಲಿಕ ಹಿಂತೆಗೆತ

ಸಮಸ್ಯೆ ಪರಿಹರಿವುದಾಗಿ ಜಿಲ್ಲಾಧಿಕಾರಿಗಳ ಆಶ್ವಾಸನೆ

ಪ್ರತಿಭಟನಾ ಧರಣಿ ತಾತ್ಕಾಲಿಕ ಹಿಂತೆಗೆತ

ಮೈಸೂರು: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ‌ರೈತರಿಂದ ಬುಧವಾರ ಅನಿರ್ದಿಷ್ಟಾವದಿ ಧರಣಿಯನ್ನು ಕೈಗೊಂಡಿದ್ದರು.

ಗುರುವಾರ ಜಿಲ್ಲಾಧಿಕಾರಿ ಲಕ್ಷ್ಮೀ ಕಾಂತ ರೆಡ್ಡಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಖುದ್ದು ಬಗೆಹರಿಸುವುದಾಗಿ ಆಶ್ವಾಸನೆ ನೀಡಿದರು. ಬಳಿಕ ಜಿಲ್ಲಾಧಿಕಾರಿಗಳ ಮಾತು ಒಪ್ಪಿದ ರೈತರು ತಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಹಿಂತೆಗೆಕೊಂಡರು.

ಈ ವೇಳೆ ಮಾತನಾಡಿದ ಎಐಕೆಕೆಎಂಎಸ್‌ನ ಜಿಲ್ಲಾ ನಾಯಕರಾದ ಬಸವರಾಜು ಹೆಚ್‌.ಎಂ, ಕಳೆದ ವರ್ಷ ರೈತರ ಹಲವಾರು ಹೋರಾಟಗಳ ನಂತರ, ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಒಂದು ಜಿಲ್ಲಾಮಟ್ಟದ ಸಮಿತಿಯನ್ನು ರಚನೆ ಮಾಡಿದರು. ಈ ಸಮಿತಿಯ ಶಿಫರಾಸ್ಸಿನಂತೆ, ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿಯ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ.
ನಂತರ 2024ರ ಆಗಸ್ಟ್ 29‌ ರಂದು ಕೆಐಎಡಿಬಿಯ ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಹೋರಾಟವನ್ನು ಶುರು ಮಾಡಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಬಂದ ಕೆಐಎಡಿಬಿಯ ಅಧಿಕಾರಿಗಳು 2024ರ ಸೆಪ್ಟಂಬರ್‌ 4ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರೈತರಿಗೆ ಕೆಲಸ ನೀಡಬೇಕಿರುವ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದರು. ಆ‌ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ವಾಪಾಸ್ ತೆಗೆದುಕೊಳ್ಳಲಾಗಿತ್ತು. ಆದರೆ ಸದರಿ ಸಭೆಯೂ, ಭೂಮಿ ನೀಡಿದ ರೈತರ ಮಕ್ಕಳಿಗೆ ಉದ್ಯೋಗ ನೀಡುವ ಬಗ್ಗೆ ಯಾವುದೇ ತಿರ್ಮಾನವಾಗಲಿಲ್ಲ. ಹಾಗೂ ಸಮಿತಿಯ ಸಭೆಗೆ ಕಾರ್ಖಾನೆಯವರನ್ನು ಕರೆದರೆ ಯಾವುದೇ ಕಾರ್ಖಾನೆಯವರು ಸಭೆಗೆ ಬರುತ್ತಿಲ್ಲ. ಇವರ ವಿರುದ್ಧ ಯಾವುದೇ ಕ್ರಮಗಳನ್ನು ಇದುವರೆಗೂ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರಾಗಲಿ, ಕೆಐಎಡಿಬಿಯ ಅಧಿಕಾರಿಗಳಾಗಲಿ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ. ಬದಲಿಗೆ ರೈತ ನಾಯಕರ ಮುಂದೆ ತಮ್ಮ ಅಸಹಾಯಕತೆಯನ್ನು ತೊರುತ್ತಿದ್ದಾರೆ. ಹಾಗಾಗಿ ಸಮಿತಿಯು ಸಭೆಗಳಿಗೆ ಬಾರದ ಕೈಗಾರಿಕೆಗಳ ಮೇಲೆ ಕ್ರಮವೇನು? ಎಂದು ಜಿಲ್ಲಾಧಿಕಾರಿಗಳಿಗೆ ಪ್ರಶ್ನಿಸಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಮುಂದಿನ ವಾರ ನನ್ನ ಅಧ್ಯಕ್ಷತೆಯಲ್ಲಿಯೇ ಸಭೆ ಕರೆಯಲಾಗುವುದು. ಎಲ್ಲಾ ಕೈಗಾರಿಕೆಯವರಿಗೂ ಕಡ್ಡಾಯವಾಗಿ ಸಭೆಗೆ ಬರಲು ತಿಳಿಸಲಾಗುವುದು. ನನ್ನ ಮಾತಿನ ಮೇಲೆ ನಂಬಿಕೆ ಇಟ್ಟು ಈ ಹೋರಾಟವನ್ನು ಹಿಂಪಡೆಯಿರಿ ಎಂದು ಹೋರಾಟಗಾರರಲ್ಲಿ ಮನವಿ ಮಾಡಿದರು.

ಒಂದು ವರ್ಷದಿಂದ ಹಲವಾರು ಸಭೆಗಳು ನಡೆದಿವೆ. ರೈತರಿಗೆ ಹೋರಾಟ ಮಾಡದೆ ಬೇರೆ ದಾರಿಯಿಲ್ಲ. ಮತ್ತೆ ಈ ಸಭೆಯಲ್ಲಿ ರೈತರಿಗೆ ಕೆಲಸ ಕೊಡಿಸಲು ಜಿಲ್ಲಾಢಳಿತ ವಿಫಲವಾದರೆ ಮತ್ತೆ ತೀವ್ರ ಹೋರಾಟವನ್ನು ಮಾಡಲಾಗುವುದು ಎಂದು ಎಚ್ಚರಿಸಿದ ರೈತ ಮುಖಂಡ ಬೊಕ್ಕಹಳ್ಳಿ ನಂಜುಂಡಸ್ವಾಮಿ ಜಿಲ್ಲಾಧಿಕಾರಿಗಳ ಮಾತಿಗೆ ಬೆಲೆ ಕೊಟ್ಟು ಅಹೋರಾತ್ರಿ ಹೋರಾಟವನ್ನು ಹಿಂಪಡೆಯಲಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago