ಮೈಸೂರು

ಅನೈತಿಕ ಸಂಬಂಧ: ರೌಡಿ ಶೀಟರ್‌ ಸೂರ್ಯ ಹತ್ಯೆ

ಮೈಸೂರು: ತಾಲ್ಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿ ಅನುಗನಹಳ್ಳಿಯ ತೋಟದಲ್ಲಿ ರೌಡಿ ಶೀಟರ್ ಸೂರ್ಯ ಬರ್ಭರ ಹತ್ಯೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೃತನನನ್ನು ರೌಡಿ ಶೀಟರ್ ಅವರ ಹೆಸರು ದೊರೆಸ್ವಾಮಿ ಅಲಿಯಾಸ್‌ ಸೂರ್ಯ ಎಂದು ಗುರುತಿಸಲಾಗಿದೆ. ಈತನನ್ನು ಮಾರಕಾಸ್ತ್ರದಿಂದ ನಾಲ್ಕಾರು ಕಡೆ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೃತ್ಯ ಮಾರ್ಚ್. 12 ರ ರಾತ್ರಿ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಸೂರ್ಯನ ವಿರುದ್ಧ 4-5 ಪ್ರಕರಣಗಳು ಇದ್ದು, ಆತ ಎಂಓಬಿಯಲ್ಲಿ ಸೇರ್ಪಡೆಯಾಗಿದ್ದನು. ಅಲ್ಲದೇ 6 ತಿಂಗಳ ಹಿಂದೆ ಅವನ ಪತ್ನಿ ದೀಪಿಕಾ ಈತನಿಂದ ದೂರವಾಗಿದ್ದಳು. ಕೆಲವು ದಿನಗಳಿಂದ ಬೇರೆಯೊಂದು ಯುವತಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದ ಎನ್ನಲಾಗುತ್ತಿದೆ. ಅಲ್ಲದೇ ಕೃತ್ಯ ನಡೆದ ಸ್ಥಳದಲ್ಲಿ ಹೋಟೆಲ್‌ನಿಂದ ತೆಗೆದುಕೊಂಡು ಬಂದ ಪದಾರ್ಥಗಳು ಹಾಗೂ ಮದ್ಯಪಾನ ಮಾಡಿರುವ ಸುಳಿವುಗಳು ಸಿಕ್ಕಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ವಾನ ದಳ ಹಾಗೂ ಬೆರಳುಮುದ್ರೆ ಘಟಕದೊಂದಿಗೆ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಕೊಲೆಯ ಅಪರಾಧಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಶ್ವೇತಾ ಎಂಬ ಯುವತಿಯೇ ತನ್ನ ಪತಿಯನ್ನು ಕೊಂದಿದ್ದಾಳೆ: ಪತ್ನಿ ದೀಪಿಕಾ ಆರೋಪ

ಇನ್ನು ರೌಡ ಶೀಟರ್‌ ಸೂರ್ಯನ ಪತ್ನಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ನನ್ನ ಗಂಡನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಶ್ವೇತಾ ಎಂಬ ಯುವತಿಯೇ ತನ್ನ ಪತಿಯನ್ನು ಸಾಯಿಸಿದ್ದಾಳೆ ಎಂದಿದ್ದಾರೆ.

ಶ್ವೇತಾ ಎಂಬಾಕೆ ಖಾಸಗಿ ವಾಹಿನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ನನ್ನ ಗಂಡನಿಗೆ ಇನ್​ಸ್ಟಾಗ್ರಾಮ್ ಮೂಲಕ ಸೂರ್ಯನಿಗೆ ಹತ್ತಿರವಾಗಿದ್ದಳಂತೆ. ಶ್ವೇತಾಳೊಂದಿಗೆ ಬದುಕಲಾರಂಭಿಸಿದ್ದ ಸೂರ್ಯ ಹೆಂಡತಿ-ಮಕ್ಕಳು ಹಾಗೂ ಹೆತ್ತ ತಾಯಿಯನ್ನೂ ಮನೆಯಿಂದ ಹೊರಹಾಕಿದ್ದರು. ಅಲ್ಲದೇ ನನ್ನ ಗಂಡ ಸಾಯುವ ಹಿಂದಿನ ರಾತ್ರಿ ಸೂರ್ಯ ಮತ್ತು ಶ್ವೇತಾ ಜೊತೆಗಿದ್ದರೆಂದು ಅವರು ಹೇಳುತ್ತಾರೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

48 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

1 hour ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

1 hour ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

2 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

2 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago