ಮೈಸೂರು

ಅನೈತಿಕ ಸಂಬಂಧ: ರೌಡಿ ಶೀಟರ್‌ ಸೂರ್ಯ ಹತ್ಯೆ

ಮೈಸೂರು: ತಾಲ್ಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿ ಅನುಗನಹಳ್ಳಿಯ ತೋಟದಲ್ಲಿ ರೌಡಿ ಶೀಟರ್ ಸೂರ್ಯ ಬರ್ಭರ ಹತ್ಯೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೃತನನನ್ನು ರೌಡಿ ಶೀಟರ್ ಅವರ ಹೆಸರು ದೊರೆಸ್ವಾಮಿ ಅಲಿಯಾಸ್‌ ಸೂರ್ಯ ಎಂದು ಗುರುತಿಸಲಾಗಿದೆ. ಈತನನ್ನು ಮಾರಕಾಸ್ತ್ರದಿಂದ ನಾಲ್ಕಾರು ಕಡೆ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೃತ್ಯ ಮಾರ್ಚ್. 12 ರ ರಾತ್ರಿ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಸೂರ್ಯನ ವಿರುದ್ಧ 4-5 ಪ್ರಕರಣಗಳು ಇದ್ದು, ಆತ ಎಂಓಬಿಯಲ್ಲಿ ಸೇರ್ಪಡೆಯಾಗಿದ್ದನು. ಅಲ್ಲದೇ 6 ತಿಂಗಳ ಹಿಂದೆ ಅವನ ಪತ್ನಿ ದೀಪಿಕಾ ಈತನಿಂದ ದೂರವಾಗಿದ್ದಳು. ಕೆಲವು ದಿನಗಳಿಂದ ಬೇರೆಯೊಂದು ಯುವತಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದ ಎನ್ನಲಾಗುತ್ತಿದೆ. ಅಲ್ಲದೇ ಕೃತ್ಯ ನಡೆದ ಸ್ಥಳದಲ್ಲಿ ಹೋಟೆಲ್‌ನಿಂದ ತೆಗೆದುಕೊಂಡು ಬಂದ ಪದಾರ್ಥಗಳು ಹಾಗೂ ಮದ್ಯಪಾನ ಮಾಡಿರುವ ಸುಳಿವುಗಳು ಸಿಕ್ಕಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ವಾನ ದಳ ಹಾಗೂ ಬೆರಳುಮುದ್ರೆ ಘಟಕದೊಂದಿಗೆ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಕೊಲೆಯ ಅಪರಾಧಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಶ್ವೇತಾ ಎಂಬ ಯುವತಿಯೇ ತನ್ನ ಪತಿಯನ್ನು ಕೊಂದಿದ್ದಾಳೆ: ಪತ್ನಿ ದೀಪಿಕಾ ಆರೋಪ

ಇನ್ನು ರೌಡ ಶೀಟರ್‌ ಸೂರ್ಯನ ಪತ್ನಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ನನ್ನ ಗಂಡನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಶ್ವೇತಾ ಎಂಬ ಯುವತಿಯೇ ತನ್ನ ಪತಿಯನ್ನು ಸಾಯಿಸಿದ್ದಾಳೆ ಎಂದಿದ್ದಾರೆ.

ಶ್ವೇತಾ ಎಂಬಾಕೆ ಖಾಸಗಿ ವಾಹಿನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ನನ್ನ ಗಂಡನಿಗೆ ಇನ್​ಸ್ಟಾಗ್ರಾಮ್ ಮೂಲಕ ಸೂರ್ಯನಿಗೆ ಹತ್ತಿರವಾಗಿದ್ದಳಂತೆ. ಶ್ವೇತಾಳೊಂದಿಗೆ ಬದುಕಲಾರಂಭಿಸಿದ್ದ ಸೂರ್ಯ ಹೆಂಡತಿ-ಮಕ್ಕಳು ಹಾಗೂ ಹೆತ್ತ ತಾಯಿಯನ್ನೂ ಮನೆಯಿಂದ ಹೊರಹಾಕಿದ್ದರು. ಅಲ್ಲದೇ ನನ್ನ ಗಂಡ ಸಾಯುವ ಹಿಂದಿನ ರಾತ್ರಿ ಸೂರ್ಯ ಮತ್ತು ಶ್ವೇತಾ ಜೊತೆಗಿದ್ದರೆಂದು ಅವರು ಹೇಳುತ್ತಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

6 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

6 hours ago