ಮೈಸೂರು

ಜಾತಿ ಜನಗಣತಿ ಕೈ ಸೇರಿದ ಕೂಡಲೇ ಒಳ ಮೀಸಲಾತಿ ಜಾರಿ : ಸಚಿವ ಎಚ್.ಸಿ ಮಹದೇವಪ್ಪ

ತಿ.ನರಸೀಪುರ: ರಾಜ್ಯ ಸರ್ಕಾರ, ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವನಾದ ನಾನು ಸೇರಿ ಮೂವರು ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಪರವಿದ್ದೇವೆ. ನ್ಯಾ.ನಾಗಮೋಹನ್ ದಾಸ್ ಜಾತಿ ಜನಗಣತಿ ವರದಿ ಕೈ ಸೇರಿದ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭರವಸೆ ನೀಡಿದರು.

ತಾಲ್ಲೂಕಿನ ವ್ಯಾಸರಾಜಪುರ ಗ್ರಾಮದಲ್ಲಿ ಶನಿವಾರ ಮಾದರಿ ವಿದ್ಯುತ್ ಗ್ರಾಮ ಯೋಜನೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ವರುಣ ವಿಧಾನಸಭಾ ಕ್ಷೇತ್ರದ ಹುಣಸೂರು ಗ್ರಾಮದ ಸಮುದಾಯ ಯುವಕನೋರ್ವ ಸಚಿವರಿಗೆ ಮುತ್ತಿಗೆ ಹಾಕಿ, ಒಳ ಮೀಸಲಾತಿ ಜಾರಿಯ ಬಗ್ಗೆ ನಿಮ್ಮ ನಿಲುವನ್ನು ಪ್ರಕಟಿಸಬೇಕೆಂದು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಪ್ರತ್ರಿಕ್ರಿಯಿಸಿದ ಸಚಿವರು, ದತ್ತಾಂಶಕ್ಕೆ ಆಯೋಗ ಅಂಕಿ ಸಂಖ್ಯೆ ಕೊಟ್ಟಾಗ ಸಂವಿಧಾನದ ನಿಯಮದಡಿ ಒಳ ಮೀಸಲನ್ನು ನಾವೇ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಒಳ ಮೀಸಲಾತಿ ಜಾರಿಗೆ ಸಂಬಂಧ ಸುಪ್ರೀಂ ಕೋರ್ಟ್ ಆಯಾಯ ರಾಜ್ಯ ಸರ್ಕಾರಗಳು ನಿರ್ಧಾರ ತೆಗೆದುಕೊಳ್ಳಬಹುದೆಂದು ಆದೇಶ ನೀಡಿದ ಬಳಿಕ ಹರಿಯಾಣದಲ್ಲಿ ಸರ್ಕಾರ ಸಂಪೂರ್ಣವಾಗಿ ಜಾರಿ ಮಾಡುವ ನಿರ್ಧಾರವನ್ನು ತೆಗೆದುಕೊಂಡಿದೆಯಾದರೂ ಇನ್ನೂ ಜಾರಿ ಮಾಡಿಲ್ಲ. ನೆರೆಯ ತೆಲಂಗಾಣದಲ್ಲಿರುವ ಕಾಂಗ್ರೆಸ್ ಸರ್ಕಾರ ಹಾಗೂ ಆಂಧ್ರಪ್ರದೇಶದಲ್ಲಿ ಒಳಮೀಸಲಿಗೆ ಅಲ್ಲಿನ ಸರ್ಕಾರಗಳು ಮುಂದಾಗಿವೆ. ಪರಿಶಿಷ್ಟರ ಜಾತಿ ಪಟ್ಟಿಯಲ್ಲಿನ ಜಾತಿಯನ್ನು ತೆಗೆಯುವುದು ಅಥವಾ ಮತ್ತೊಂದು ಜಾತಿಯನ್ನು ಸೇರ್ಪಡೆಗೊಳಿಸುವ ಅಧಿಕಾರ ಸಂಸತ್ತಿಗೆ ಇದೆ. ಮಾದಿಗ ಅಥವಾ ಹೊಲೆಯ ಎಂಬ ಪದವನ್ನು ಬಳಸುವುದೇ ಅಸ್ಪೃಶ್ಯತೆ ಆಚರಿಸಿದಂತೆ ಎಂಬುದನ್ನು ಸಮುದಾಯಗಳು ಅರಿಯಬೇಕು. ಈ ಹಿಂದೆಯೇ ಒಳ ಮೀಸಲಾತಿ ಜಾರಿಗೆ ತರಲು ಮಾಯಾವತಿ ಸೇರಿದಂತೆ ಬಾಬೂಜಿ ಪುತ್ರಿ ಮೀರಾ ಕುಮಾರ್ ಹಾಗೂ ರಾಮವಿಲಾಸ್ ಪಾಸ್ವಾನ್ ನಿರಾಕರಿಸಿದ್ದರು ಎಂಬುದನ್ನು ನೆನಪಿಸಿದರು.

ರಾಜ್ಯದಲ್ಲಿ ಎಸ್.ಎಂ.ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಒಳಮಿಸಲಾತಿ ಸಂಬಂಧ ನ್ಯಾ.ಸದಾಶಿವ ಆಯೋಗವನ್ನು ರಚನೆ ಮಾಡಲಾಯಿತು. ಅಲ್ಲಿಂದ ಕಾಂಗ್ರೆಸ್, ಬಿಜೆಪಿ ಹಾಗೂ ಜಾ.ದಳ ಸಮಿಶ್ರ ಸರ್ಕಾರಗಳ ಅವಧಿಯಲ್ಲಿಯೂ ಹೋರಾಟಗಳು ನಡೆಯುತ್ತಲೇ ಬಂದಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುವ ಬದಲು ಮುಚ್ಚಿಟ್ಟು, ಪರಿಶಿಷ್ಟ ಜಾತಿಯ ಮೀಸಲನ್ನು ಹಂಚಿಕೆ ಮಾಡಲಾಯಿತು. ೨೦೨೩ರ ಚುನಾವಣೆ ಪೂರ್ವದಲ್ಲಿ ಒಳಮೀಸಲಾತಿ ಜಾರಿ ಮಾಡುವ ಘೋಷಣೆಯೊಂದಿಗೆ ಕಾಂಗ್ರೆಸ್ ಚಿತ್ರದುರ್ಗದಲ್ಲಿ ಸಮಾವೇಶ ನಡೆಸಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಸಂಬಂಧ ಸಹಮತ ವ್ಯಕ್ತಪಡಿಸಿ ಜಾರಿಗೆ ಸೂಚನೆ ನೀಡುವುದರಿಂದ ಸಿಎಂ ಸೇರಿದಂತೆ ಸಂಪುಟದಲ್ಲಿರುವ ಪರಿಶಿಷ್ಟ ಜಾತಿಯ ಸಚಿವರು ಹಾಗೂ ಶಾಸಕರೆಲ್ಲರೂ ಒಳ ಮೀಸಲಾತಿಯನ್ನು ಕ್ರಮಬದ್ಧವಾಗಿ ಸಂವಿಧಾನದಲ್ಲಿ ಜಾರಿಗೆ ತರಲು ಮುಂದಾಗಿದ್ದೇವೆ ಎಂದು ಡಾ. ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

7 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

8 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

8 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

8 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

9 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

10 hours ago