ಮೈಸೂರು

ಜಾತಿ ಜನಗಣತಿ ಕೈ ಸೇರಿದ ಕೂಡಲೇ ಒಳ ಮೀಸಲಾತಿ ಜಾರಿ : ಸಚಿವ ಎಚ್.ಸಿ ಮಹದೇವಪ್ಪ

ತಿ.ನರಸೀಪುರ: ರಾಜ್ಯ ಸರ್ಕಾರ, ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವನಾದ ನಾನು ಸೇರಿ ಮೂವರು ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಪರವಿದ್ದೇವೆ. ನ್ಯಾ.ನಾಗಮೋಹನ್ ದಾಸ್ ಜಾತಿ ಜನಗಣತಿ ವರದಿ ಕೈ ಸೇರಿದ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭರವಸೆ ನೀಡಿದರು.

ತಾಲ್ಲೂಕಿನ ವ್ಯಾಸರಾಜಪುರ ಗ್ರಾಮದಲ್ಲಿ ಶನಿವಾರ ಮಾದರಿ ವಿದ್ಯುತ್ ಗ್ರಾಮ ಯೋಜನೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ವರುಣ ವಿಧಾನಸಭಾ ಕ್ಷೇತ್ರದ ಹುಣಸೂರು ಗ್ರಾಮದ ಸಮುದಾಯ ಯುವಕನೋರ್ವ ಸಚಿವರಿಗೆ ಮುತ್ತಿಗೆ ಹಾಕಿ, ಒಳ ಮೀಸಲಾತಿ ಜಾರಿಯ ಬಗ್ಗೆ ನಿಮ್ಮ ನಿಲುವನ್ನು ಪ್ರಕಟಿಸಬೇಕೆಂದು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಪ್ರತ್ರಿಕ್ರಿಯಿಸಿದ ಸಚಿವರು, ದತ್ತಾಂಶಕ್ಕೆ ಆಯೋಗ ಅಂಕಿ ಸಂಖ್ಯೆ ಕೊಟ್ಟಾಗ ಸಂವಿಧಾನದ ನಿಯಮದಡಿ ಒಳ ಮೀಸಲನ್ನು ನಾವೇ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಒಳ ಮೀಸಲಾತಿ ಜಾರಿಗೆ ಸಂಬಂಧ ಸುಪ್ರೀಂ ಕೋರ್ಟ್ ಆಯಾಯ ರಾಜ್ಯ ಸರ್ಕಾರಗಳು ನಿರ್ಧಾರ ತೆಗೆದುಕೊಳ್ಳಬಹುದೆಂದು ಆದೇಶ ನೀಡಿದ ಬಳಿಕ ಹರಿಯಾಣದಲ್ಲಿ ಸರ್ಕಾರ ಸಂಪೂರ್ಣವಾಗಿ ಜಾರಿ ಮಾಡುವ ನಿರ್ಧಾರವನ್ನು ತೆಗೆದುಕೊಂಡಿದೆಯಾದರೂ ಇನ್ನೂ ಜಾರಿ ಮಾಡಿಲ್ಲ. ನೆರೆಯ ತೆಲಂಗಾಣದಲ್ಲಿರುವ ಕಾಂಗ್ರೆಸ್ ಸರ್ಕಾರ ಹಾಗೂ ಆಂಧ್ರಪ್ರದೇಶದಲ್ಲಿ ಒಳಮೀಸಲಿಗೆ ಅಲ್ಲಿನ ಸರ್ಕಾರಗಳು ಮುಂದಾಗಿವೆ. ಪರಿಶಿಷ್ಟರ ಜಾತಿ ಪಟ್ಟಿಯಲ್ಲಿನ ಜಾತಿಯನ್ನು ತೆಗೆಯುವುದು ಅಥವಾ ಮತ್ತೊಂದು ಜಾತಿಯನ್ನು ಸೇರ್ಪಡೆಗೊಳಿಸುವ ಅಧಿಕಾರ ಸಂಸತ್ತಿಗೆ ಇದೆ. ಮಾದಿಗ ಅಥವಾ ಹೊಲೆಯ ಎಂಬ ಪದವನ್ನು ಬಳಸುವುದೇ ಅಸ್ಪೃಶ್ಯತೆ ಆಚರಿಸಿದಂತೆ ಎಂಬುದನ್ನು ಸಮುದಾಯಗಳು ಅರಿಯಬೇಕು. ಈ ಹಿಂದೆಯೇ ಒಳ ಮೀಸಲಾತಿ ಜಾರಿಗೆ ತರಲು ಮಾಯಾವತಿ ಸೇರಿದಂತೆ ಬಾಬೂಜಿ ಪುತ್ರಿ ಮೀರಾ ಕುಮಾರ್ ಹಾಗೂ ರಾಮವಿಲಾಸ್ ಪಾಸ್ವಾನ್ ನಿರಾಕರಿಸಿದ್ದರು ಎಂಬುದನ್ನು ನೆನಪಿಸಿದರು.

ರಾಜ್ಯದಲ್ಲಿ ಎಸ್.ಎಂ.ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಒಳಮಿಸಲಾತಿ ಸಂಬಂಧ ನ್ಯಾ.ಸದಾಶಿವ ಆಯೋಗವನ್ನು ರಚನೆ ಮಾಡಲಾಯಿತು. ಅಲ್ಲಿಂದ ಕಾಂಗ್ರೆಸ್, ಬಿಜೆಪಿ ಹಾಗೂ ಜಾ.ದಳ ಸಮಿಶ್ರ ಸರ್ಕಾರಗಳ ಅವಧಿಯಲ್ಲಿಯೂ ಹೋರಾಟಗಳು ನಡೆಯುತ್ತಲೇ ಬಂದಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುವ ಬದಲು ಮುಚ್ಚಿಟ್ಟು, ಪರಿಶಿಷ್ಟ ಜಾತಿಯ ಮೀಸಲನ್ನು ಹಂಚಿಕೆ ಮಾಡಲಾಯಿತು. ೨೦೨೩ರ ಚುನಾವಣೆ ಪೂರ್ವದಲ್ಲಿ ಒಳಮೀಸಲಾತಿ ಜಾರಿ ಮಾಡುವ ಘೋಷಣೆಯೊಂದಿಗೆ ಕಾಂಗ್ರೆಸ್ ಚಿತ್ರದುರ್ಗದಲ್ಲಿ ಸಮಾವೇಶ ನಡೆಸಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಸಂಬಂಧ ಸಹಮತ ವ್ಯಕ್ತಪಡಿಸಿ ಜಾರಿಗೆ ಸೂಚನೆ ನೀಡುವುದರಿಂದ ಸಿಎಂ ಸೇರಿದಂತೆ ಸಂಪುಟದಲ್ಲಿರುವ ಪರಿಶಿಷ್ಟ ಜಾತಿಯ ಸಚಿವರು ಹಾಗೂ ಶಾಸಕರೆಲ್ಲರೂ ಒಳ ಮೀಸಲಾತಿಯನ್ನು ಕ್ರಮಬದ್ಧವಾಗಿ ಸಂವಿಧಾನದಲ್ಲಿ ಜಾರಿಗೆ ತರಲು ಮುಂದಾಗಿದ್ದೇವೆ ಎಂದು ಡಾ. ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

1 hour ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

4 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

5 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago