ಮೈಸೂರು

ಯುವಜನರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿ: ಡಾ. ಕೆ.ವಿ ರಾಜೇಂದ್ರ

ಮೈಸೂರು: ನಿರುದ್ಯೋಗ ಪದವೀಧರರ ಕನಸನ್ನು ಸಾಕಾರಗೊಳಿಸಲು ಹಾಗೂ ಅವರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ಹೇಳಿದರು.

ಇಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನಡೆದ ಸ್ವಾಮಿವಿವೇಕಾನಂದರ ಜಯಂತಿ ಹಾಗೂ ಯುವನಿಧಿ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ರಾಷ್ಟೀಯ ಯುವದಿನದಂದು ಜಾರಿಯಾಗುತ್ತಿರುವ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಯುವಜನರಿಗೆ ಪದವಿಧರರಿಗೆ ರೂ.3000 ಹಾಗೂ ಡಿಪ್ಲೋಮಾ ಮಾಡಿದವರಿಗೆ ರೂ.1500 ಗಳನ್ನು ನೀಡಲಾಗುತ್ತಿದೆ. ಈ ಹಣವನ್ನು ಯಾವುದೇ ರೀತಿಯ ದುರುಪಯೋಗ ಪಡಿಸಿಕೊಳ್ಳದೆ ತಮ್ಮ ಮುಂದಿನ ವಿದ್ಯಾಭ್ಯಾಸ ಇಲ್ಲವೇ ಸ್ವಯಂ ಉದ್ಯೋಗಕ್ಕಾಗಿ ಬಳಸಿಕೊಳ್ಳಬೇಕು. ಸಮಯ ಎಂಬುದು ಕ್ಷಣಾರ್ಧದಲ್ಲಿ ಕಳೆದುಹೋಗುತ್ತದೆ ಹಾಗಾಗಿ ಇದನ್ನು ನಿಮ್ಮ ಗುರಿ ತಲುಪಲು ಒಂದು ಸಹಾಯವಾಗಿ ಬಳಸಿಕೊಂಡು ಇದರ ಪ್ರಯೋಜನ ಪಡೆದು ಪ್ರಾಮಾಣಿಕವಾಗಿ ಕೆಲಸ ಮಾಡಿ ಸಾಮಾಜಿಕ ಕಳಕಳಿ ಇರುವ ಸ್ವಾವಲಂಬಿ ಯುವಜನರಾಗಿ ಬೆಳೆಯಬೇಕು ಎಂದು ಕಿವಿಮಾತು ಹೇಳಿದರು.

ಪ್ರಸ್ತುತ ಡ್ರಗ್ಸ್ ಎಂಬುದು ಎಲ್ಲಾ ಕಾಲೇಜುಗಳಲ್ಲೂ ಅವರಿಸುತ್ತಿದೆ. ಹೆಣ್ಣು ಗಂಡು ಎಂಬ ಬೇಧವಿಲ್ಲದೆ ಎಲ್ಲರೂ ಅದಕ್ಕೆ ದಾಸರಗುತ್ತಿದ್ದಾರೆ. ಹೆಣ್ಣಾಗಲಿ ಗಂಡಾಗಲಿ ಈ ದುಶ್ಚಟಗಳಿಗೆ ಗುರಿಯಾಗದಂತೆ ನೋಡಿಕೊಂಡು ಡ್ರಗ್ಸ್ ಮುಕ್ತ ಕ್ಯಾಂಪಸ್ ಮಾಡಲು ಮುಂದಾಗಬೇಕು ಎಂದರು.

ಯುವಜನರಿಗೆ ಮಾದರಿಯಾಗಿರುವ ವಿವೇಕಾನಂದರ ದಿನದಂದು ಎಲ್ಲಾ ಯುವಜನರು ಅವರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಒಳ್ಳೆಯ ಮಾರ್ಗದಲ್ಲಿ ನಡೆದು ಇತರರಿಗೆ ಮಾದರಿಯಾಗಬೇಕು ಎಂದು ಪ್ರೋತ್ಸಾಹದ ಮಾತುಗಳನ್ನು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿ ಕೆ. ನಾರಾಯಣ ಮೂರ್ತಿ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಸಹಾಯಕ ನಿರ್ದೇಶಕ ಎಚ್.ಎಂ ಮಂಜುನಾಥ್, ಮಹಾರಾಣಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ ಅಬ್ದುಲ್ ರಹಿಮಾನ್ ಎಂ ಹಾಗೂ ಇತರರು ಉಪಸ್ಥಿತರಿದ್ದರು.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

11 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

11 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

11 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

11 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

12 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

12 hours ago