ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ಸಮ್ಮುಖದಲ್ಲಿ ಯದುವೀರ್‌ ಮತ ಬೇಟೆ !

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಜಿ.ಟಿ.ದೇವೇಗೌಡರ ಸಮ್ಮುಖದಲ್ಲಿ ಬಿಜೆಪಿ-ಜಾ.ದಳ ಮೈತ್ರಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಿರುಸಿನ ಮತಾಂಚನೆ ನಡೆಸಿದರು.

ಜಾ.ದಳದ ಭದ್ರಕೋಟೆಯಾಗಿರುವ ಚಾಮುಂಡೇಶ್ವರಿಯಲ್ಲಿ  ಅಬ್ಬರದ ಪ್ರಚಾರ ನಡೆಸುವ ಮೂಲಕ ಸಂಚಲನ ಮೂಡಿಸಿದರು. ರಾಜಮನೆತನದ ಬಗ್ಗೆ ಅಪಾರ ಗೌರವವಿರುವ ಹಳ್ಳಿಗಳಲ್ಲಿ ಯದುವೀರ್ ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿ ಆರತಿ ಬೆಳಗಿ, ಪುಷ್ಪವೃಷ್ಟಿ ಮೂಲಕ ಗೌರವ ಸೂಚಿಸಿದರು.

ಬೆಳಿಗ್ಗೆ ೭ರಿಂದ ಪ್ರಾರಂಭಗೊಂಡ ಮತಾಂಚನೆ ಸಾತಗಳ್ಳಿ, ಗಳಿಗರಹುಂಡಿ, ಹಂಚ್ಯಾ, ರಮ್ಮನಹಳ್ಳಿ, ಕಾಮನಕೆರೆ ಹುಂಡಿ, ಹಳೆ ಕೆಸರೆ, ಬೆಲವತ್ತ, ಕೆ.ಆರ್.ಮಿಲ್, ಸಿದ್ದಲಿಂಗಪುರ, ಕಳಸ್ತವಾಡಿ, ಲಕ್ಷ್ಮೀಪುರ, ನಾಗನಹಳ್ಳಿ, ಶ್ಯಾದನಹಳ್ಳಿ, ಮೈದನಹಳ್ಳಿ, ಮೇಗಳಾಪುರ, ಮಲ್ಲೇಗೌಡನಕೊಪ್ಪಲು, ಉಂಡುವಾಡಿ, ಚಿಕ್ಕನಹಳ್ಳಿ, ಆನಂದೂರು, ಕಲ್ಲೂರು ನಾಗನಹಳ್ಳಿ, ಕಲ್ಲೂರು, ಎಡಹಳ್ಳಿ, ರಾಮನಹಳ್ಳಿ, ಸಾಗರಕಟ್ಟೆ, ಹೊಸಕೋಟೆ, ಮಂಚೇಗೌಡನಹಳ್ಳಿ, ದಡದ ಕಲ್ಲಹಳ್ಳಿ, ಹನುಮಂತನಗರ, ಛತ್ರದಕೊಪ್ಪಲು, ಗುಂಗ್ರಾಲ್‌ಛತ್ರ, ಯಲಚನಹಳ್ಳಿ, ಈರಪ್ಪನಕೊಪ್ಪಲು, ಇಲವಾಲ ಗ್ರಾಮಗಳಲ್ಲಿ ಮತಾಂಚನೆ ನಡೆಸಿದರು. ಗ್ರಾಮದ ದೇವಾಲುಂಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.  ಗ್ರಾಮದಲ್ಲಿನ ಅಂಬೇಡ್ಕರ್, ಬಸವ, ಕೆಂಪೇಗೌಡ ಸೇರಿ ಹಲವು ಪ್ರತಿಮೆಗಳಿಗೆ ಮಾಲಾರ್ಪಣೆ ಸಹ ಮಾಡಿದರು.

ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಕೆಲವರು ದಂತಗೋಪರದಲ್ಲಿ ಇರುವ ವ್ಯಕ್ತಿ, ಅರಮನೆ ವಾತಾವರಣದಲ್ಲಿ ಬೆಳೆದಿರುವ ವ್ಯಕ್ತಿ ಹೇಗೆ ಜನರ ಬಳಿಗೆ ಬಂದು ಸಂಕಷ್ಟಕ್ಕೆ ಪರಿಹರಿಸುತ್ತಾರೆ. ಹಳ್ಳಿಗೆ ಬರ್ತಾರಾ, ಗ್ರಾಮಕ್ಕೆ ಬರುತ್ತಾರಾ ಹೇಗೆ ಎಂಬಂತಹ ಎನೇನೋ ಪ್ರಶ್ನೆಗಳು? ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ನಾನು ಮಾಡುವ ಕೆಲಸ ಎಲ್ಲದಕ್ಕೂ ಉತ್ತರ ಕೊಡಲಿದೆ ಎಂದು ಭಾವಿಸಿದ್ದೇನೆ. ಇದಕ್ಕೊಂದು ಅವಕಾಶ ಕೊಡಿ ಎಂದು ಕೋರಿದರು.

ಇಂದು ಜಾ.ದಳ ಹಾಗೂ ಬಿಜೆಪಿ ಅಭಿವೃದ್ಧಿ ಭಾರತಕ್ಕೆ ಮೋದಿಯವರನ್ನು ಪ್ರಧಾನಿಯನ್ನಾಗಿ ಮತ್ತೆ ಮಾಡಬೇಕೆಂದು ಮೈತ್ರಿ ಆಗಿದ್ದೇವೆ. ಅದಕ್ಕೆ ಹೆಚ್ಚಿನ ರೀತಿಯಲ್ಲಿ ಜನ ಬೆಂಬಲ ಸಿಗಬೇಕು. ಅದಕ್ಕೆ ನಿಮ್ಮ ಮತಗಳ ಮೂಲಕ ಎದುರಾಳಿಗಳಿಗೆ ಉತ್ತರ ಕೊಡುವ ಕೆಲಸವನ್ನು ಬಿಜೆಪಿಯ ಕಮಲದ ಗುರುತಿಗೆ ಮತ ಹಾಕುವ ಮೂಲಕ ಮಾಡಿ ಎಂದು ಹೇಳಿದರು.

ಮಾಜಿ ಸಚಿವ ಎಸ್.ಎ.ರಾಮದಾಸ್, ಬಿಜೆಪಿ ಮುಖಂಡ ಕವೀಶ್‌ಗೌಡ, ವಸ್ತುಪ್ರದರ್ಶನ ಪ್ರಾಧಿಕಾರದ ವಾಜಿ ಅಧ್ಯಕ್ಷ ಎ. ಹೇಮಂತ ಕುವಾರ್‌ಗೌಡ, ಅರುಣ್ ಕುವಾರ್‌ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ,  ಹೀಗಿರುವಾಗ ರಾಜವಂಶಸ್ಥರೇ ಅಭ್ಯರ್ಥಿಾಂಗಿ ನಿಮ್ಮ ಬಳಿಗೆ ಬಂದಿದ್ದಾರೆ. ನೀವೆಲ್ಲರೂ ಹೆಚ್ಚಿನ ಮತಗಳನ್ನು ಬಿಜೆಪಿ ಗುರುತಿಗೆ ನೀಡುವ ಮೂಲಕ ಈ ಮೈತ್ರಿುಂನ್ನು ಗೆಲ್ಲಿಸಬೇಕು.ವಾತ್ರವಲ್ಲದೆ, ಸಣ್ಣಪುಟ್ಟ ವೈಮನಸ್ಸನ್ನು ತೊರೆದು ಅಭ್ಯರ್ಥಿ ಗೆಲುವಿಗೆ ಮತ ಹಾಕಿ ಚಾಮುಂಡೇಶ್ವರಿುಂಲ್ಲಿ ಅತಿಹೆಚ್ಚು ಮತ ನೀಡುವಂತೆ ಹೇಳಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

44 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

54 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago