ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ಸಮ್ಮುಖದಲ್ಲಿ ಯದುವೀರ್‌ ಮತ ಬೇಟೆ !

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಜಿ.ಟಿ.ದೇವೇಗೌಡರ ಸಮ್ಮುಖದಲ್ಲಿ ಬಿಜೆಪಿ-ಜಾ.ದಳ ಮೈತ್ರಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಿರುಸಿನ ಮತಾಂಚನೆ ನಡೆಸಿದರು.

ಜಾ.ದಳದ ಭದ್ರಕೋಟೆಯಾಗಿರುವ ಚಾಮುಂಡೇಶ್ವರಿಯಲ್ಲಿ  ಅಬ್ಬರದ ಪ್ರಚಾರ ನಡೆಸುವ ಮೂಲಕ ಸಂಚಲನ ಮೂಡಿಸಿದರು. ರಾಜಮನೆತನದ ಬಗ್ಗೆ ಅಪಾರ ಗೌರವವಿರುವ ಹಳ್ಳಿಗಳಲ್ಲಿ ಯದುವೀರ್ ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿ ಆರತಿ ಬೆಳಗಿ, ಪುಷ್ಪವೃಷ್ಟಿ ಮೂಲಕ ಗೌರವ ಸೂಚಿಸಿದರು.

ಬೆಳಿಗ್ಗೆ ೭ರಿಂದ ಪ್ರಾರಂಭಗೊಂಡ ಮತಾಂಚನೆ ಸಾತಗಳ್ಳಿ, ಗಳಿಗರಹುಂಡಿ, ಹಂಚ್ಯಾ, ರಮ್ಮನಹಳ್ಳಿ, ಕಾಮನಕೆರೆ ಹುಂಡಿ, ಹಳೆ ಕೆಸರೆ, ಬೆಲವತ್ತ, ಕೆ.ಆರ್.ಮಿಲ್, ಸಿದ್ದಲಿಂಗಪುರ, ಕಳಸ್ತವಾಡಿ, ಲಕ್ಷ್ಮೀಪುರ, ನಾಗನಹಳ್ಳಿ, ಶ್ಯಾದನಹಳ್ಳಿ, ಮೈದನಹಳ್ಳಿ, ಮೇಗಳಾಪುರ, ಮಲ್ಲೇಗೌಡನಕೊಪ್ಪಲು, ಉಂಡುವಾಡಿ, ಚಿಕ್ಕನಹಳ್ಳಿ, ಆನಂದೂರು, ಕಲ್ಲೂರು ನಾಗನಹಳ್ಳಿ, ಕಲ್ಲೂರು, ಎಡಹಳ್ಳಿ, ರಾಮನಹಳ್ಳಿ, ಸಾಗರಕಟ್ಟೆ, ಹೊಸಕೋಟೆ, ಮಂಚೇಗೌಡನಹಳ್ಳಿ, ದಡದ ಕಲ್ಲಹಳ್ಳಿ, ಹನುಮಂತನಗರ, ಛತ್ರದಕೊಪ್ಪಲು, ಗುಂಗ್ರಾಲ್‌ಛತ್ರ, ಯಲಚನಹಳ್ಳಿ, ಈರಪ್ಪನಕೊಪ್ಪಲು, ಇಲವಾಲ ಗ್ರಾಮಗಳಲ್ಲಿ ಮತಾಂಚನೆ ನಡೆಸಿದರು. ಗ್ರಾಮದ ದೇವಾಲುಂಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.  ಗ್ರಾಮದಲ್ಲಿನ ಅಂಬೇಡ್ಕರ್, ಬಸವ, ಕೆಂಪೇಗೌಡ ಸೇರಿ ಹಲವು ಪ್ರತಿಮೆಗಳಿಗೆ ಮಾಲಾರ್ಪಣೆ ಸಹ ಮಾಡಿದರು.

ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಕೆಲವರು ದಂತಗೋಪರದಲ್ಲಿ ಇರುವ ವ್ಯಕ್ತಿ, ಅರಮನೆ ವಾತಾವರಣದಲ್ಲಿ ಬೆಳೆದಿರುವ ವ್ಯಕ್ತಿ ಹೇಗೆ ಜನರ ಬಳಿಗೆ ಬಂದು ಸಂಕಷ್ಟಕ್ಕೆ ಪರಿಹರಿಸುತ್ತಾರೆ. ಹಳ್ಳಿಗೆ ಬರ್ತಾರಾ, ಗ್ರಾಮಕ್ಕೆ ಬರುತ್ತಾರಾ ಹೇಗೆ ಎಂಬಂತಹ ಎನೇನೋ ಪ್ರಶ್ನೆಗಳು? ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ನಾನು ಮಾಡುವ ಕೆಲಸ ಎಲ್ಲದಕ್ಕೂ ಉತ್ತರ ಕೊಡಲಿದೆ ಎಂದು ಭಾವಿಸಿದ್ದೇನೆ. ಇದಕ್ಕೊಂದು ಅವಕಾಶ ಕೊಡಿ ಎಂದು ಕೋರಿದರು.

ಇಂದು ಜಾ.ದಳ ಹಾಗೂ ಬಿಜೆಪಿ ಅಭಿವೃದ್ಧಿ ಭಾರತಕ್ಕೆ ಮೋದಿಯವರನ್ನು ಪ್ರಧಾನಿಯನ್ನಾಗಿ ಮತ್ತೆ ಮಾಡಬೇಕೆಂದು ಮೈತ್ರಿ ಆಗಿದ್ದೇವೆ. ಅದಕ್ಕೆ ಹೆಚ್ಚಿನ ರೀತಿಯಲ್ಲಿ ಜನ ಬೆಂಬಲ ಸಿಗಬೇಕು. ಅದಕ್ಕೆ ನಿಮ್ಮ ಮತಗಳ ಮೂಲಕ ಎದುರಾಳಿಗಳಿಗೆ ಉತ್ತರ ಕೊಡುವ ಕೆಲಸವನ್ನು ಬಿಜೆಪಿಯ ಕಮಲದ ಗುರುತಿಗೆ ಮತ ಹಾಕುವ ಮೂಲಕ ಮಾಡಿ ಎಂದು ಹೇಳಿದರು.

ಮಾಜಿ ಸಚಿವ ಎಸ್.ಎ.ರಾಮದಾಸ್, ಬಿಜೆಪಿ ಮುಖಂಡ ಕವೀಶ್‌ಗೌಡ, ವಸ್ತುಪ್ರದರ್ಶನ ಪ್ರಾಧಿಕಾರದ ವಾಜಿ ಅಧ್ಯಕ್ಷ ಎ. ಹೇಮಂತ ಕುವಾರ್‌ಗೌಡ, ಅರುಣ್ ಕುವಾರ್‌ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ,  ಹೀಗಿರುವಾಗ ರಾಜವಂಶಸ್ಥರೇ ಅಭ್ಯರ್ಥಿಾಂಗಿ ನಿಮ್ಮ ಬಳಿಗೆ ಬಂದಿದ್ದಾರೆ. ನೀವೆಲ್ಲರೂ ಹೆಚ್ಚಿನ ಮತಗಳನ್ನು ಬಿಜೆಪಿ ಗುರುತಿಗೆ ನೀಡುವ ಮೂಲಕ ಈ ಮೈತ್ರಿುಂನ್ನು ಗೆಲ್ಲಿಸಬೇಕು.ವಾತ್ರವಲ್ಲದೆ, ಸಣ್ಣಪುಟ್ಟ ವೈಮನಸ್ಸನ್ನು ತೊರೆದು ಅಭ್ಯರ್ಥಿ ಗೆಲುವಿಗೆ ಮತ ಹಾಕಿ ಚಾಮುಂಡೇಶ್ವರಿುಂಲ್ಲಿ ಅತಿಹೆಚ್ಚು ಮತ ನೀಡುವಂತೆ ಹೇಳಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

14 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

14 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

14 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

14 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

14 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

14 hours ago