ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ಸಮ್ಮುಖದಲ್ಲಿ ಯದುವೀರ್‌ ಮತ ಬೇಟೆ !

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಜಿ.ಟಿ.ದೇವೇಗೌಡರ ಸಮ್ಮುಖದಲ್ಲಿ ಬಿಜೆಪಿ-ಜಾ.ದಳ ಮೈತ್ರಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಿರುಸಿನ ಮತಾಂಚನೆ ನಡೆಸಿದರು.

ಜಾ.ದಳದ ಭದ್ರಕೋಟೆಯಾಗಿರುವ ಚಾಮುಂಡೇಶ್ವರಿಯಲ್ಲಿ  ಅಬ್ಬರದ ಪ್ರಚಾರ ನಡೆಸುವ ಮೂಲಕ ಸಂಚಲನ ಮೂಡಿಸಿದರು. ರಾಜಮನೆತನದ ಬಗ್ಗೆ ಅಪಾರ ಗೌರವವಿರುವ ಹಳ್ಳಿಗಳಲ್ಲಿ ಯದುವೀರ್ ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿ ಆರತಿ ಬೆಳಗಿ, ಪುಷ್ಪವೃಷ್ಟಿ ಮೂಲಕ ಗೌರವ ಸೂಚಿಸಿದರು.

ಬೆಳಿಗ್ಗೆ ೭ರಿಂದ ಪ್ರಾರಂಭಗೊಂಡ ಮತಾಂಚನೆ ಸಾತಗಳ್ಳಿ, ಗಳಿಗರಹುಂಡಿ, ಹಂಚ್ಯಾ, ರಮ್ಮನಹಳ್ಳಿ, ಕಾಮನಕೆರೆ ಹುಂಡಿ, ಹಳೆ ಕೆಸರೆ, ಬೆಲವತ್ತ, ಕೆ.ಆರ್.ಮಿಲ್, ಸಿದ್ದಲಿಂಗಪುರ, ಕಳಸ್ತವಾಡಿ, ಲಕ್ಷ್ಮೀಪುರ, ನಾಗನಹಳ್ಳಿ, ಶ್ಯಾದನಹಳ್ಳಿ, ಮೈದನಹಳ್ಳಿ, ಮೇಗಳಾಪುರ, ಮಲ್ಲೇಗೌಡನಕೊಪ್ಪಲು, ಉಂಡುವಾಡಿ, ಚಿಕ್ಕನಹಳ್ಳಿ, ಆನಂದೂರು, ಕಲ್ಲೂರು ನಾಗನಹಳ್ಳಿ, ಕಲ್ಲೂರು, ಎಡಹಳ್ಳಿ, ರಾಮನಹಳ್ಳಿ, ಸಾಗರಕಟ್ಟೆ, ಹೊಸಕೋಟೆ, ಮಂಚೇಗೌಡನಹಳ್ಳಿ, ದಡದ ಕಲ್ಲಹಳ್ಳಿ, ಹನುಮಂತನಗರ, ಛತ್ರದಕೊಪ್ಪಲು, ಗುಂಗ್ರಾಲ್‌ಛತ್ರ, ಯಲಚನಹಳ್ಳಿ, ಈರಪ್ಪನಕೊಪ್ಪಲು, ಇಲವಾಲ ಗ್ರಾಮಗಳಲ್ಲಿ ಮತಾಂಚನೆ ನಡೆಸಿದರು. ಗ್ರಾಮದ ದೇವಾಲುಂಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.  ಗ್ರಾಮದಲ್ಲಿನ ಅಂಬೇಡ್ಕರ್, ಬಸವ, ಕೆಂಪೇಗೌಡ ಸೇರಿ ಹಲವು ಪ್ರತಿಮೆಗಳಿಗೆ ಮಾಲಾರ್ಪಣೆ ಸಹ ಮಾಡಿದರು.

ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಕೆಲವರು ದಂತಗೋಪರದಲ್ಲಿ ಇರುವ ವ್ಯಕ್ತಿ, ಅರಮನೆ ವಾತಾವರಣದಲ್ಲಿ ಬೆಳೆದಿರುವ ವ್ಯಕ್ತಿ ಹೇಗೆ ಜನರ ಬಳಿಗೆ ಬಂದು ಸಂಕಷ್ಟಕ್ಕೆ ಪರಿಹರಿಸುತ್ತಾರೆ. ಹಳ್ಳಿಗೆ ಬರ್ತಾರಾ, ಗ್ರಾಮಕ್ಕೆ ಬರುತ್ತಾರಾ ಹೇಗೆ ಎಂಬಂತಹ ಎನೇನೋ ಪ್ರಶ್ನೆಗಳು? ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ನಾನು ಮಾಡುವ ಕೆಲಸ ಎಲ್ಲದಕ್ಕೂ ಉತ್ತರ ಕೊಡಲಿದೆ ಎಂದು ಭಾವಿಸಿದ್ದೇನೆ. ಇದಕ್ಕೊಂದು ಅವಕಾಶ ಕೊಡಿ ಎಂದು ಕೋರಿದರು.

ಇಂದು ಜಾ.ದಳ ಹಾಗೂ ಬಿಜೆಪಿ ಅಭಿವೃದ್ಧಿ ಭಾರತಕ್ಕೆ ಮೋದಿಯವರನ್ನು ಪ್ರಧಾನಿಯನ್ನಾಗಿ ಮತ್ತೆ ಮಾಡಬೇಕೆಂದು ಮೈತ್ರಿ ಆಗಿದ್ದೇವೆ. ಅದಕ್ಕೆ ಹೆಚ್ಚಿನ ರೀತಿಯಲ್ಲಿ ಜನ ಬೆಂಬಲ ಸಿಗಬೇಕು. ಅದಕ್ಕೆ ನಿಮ್ಮ ಮತಗಳ ಮೂಲಕ ಎದುರಾಳಿಗಳಿಗೆ ಉತ್ತರ ಕೊಡುವ ಕೆಲಸವನ್ನು ಬಿಜೆಪಿಯ ಕಮಲದ ಗುರುತಿಗೆ ಮತ ಹಾಕುವ ಮೂಲಕ ಮಾಡಿ ಎಂದು ಹೇಳಿದರು.

ಮಾಜಿ ಸಚಿವ ಎಸ್.ಎ.ರಾಮದಾಸ್, ಬಿಜೆಪಿ ಮುಖಂಡ ಕವೀಶ್‌ಗೌಡ, ವಸ್ತುಪ್ರದರ್ಶನ ಪ್ರಾಧಿಕಾರದ ವಾಜಿ ಅಧ್ಯಕ್ಷ ಎ. ಹೇಮಂತ ಕುವಾರ್‌ಗೌಡ, ಅರುಣ್ ಕುವಾರ್‌ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ,  ಹೀಗಿರುವಾಗ ರಾಜವಂಶಸ್ಥರೇ ಅಭ್ಯರ್ಥಿಾಂಗಿ ನಿಮ್ಮ ಬಳಿಗೆ ಬಂದಿದ್ದಾರೆ. ನೀವೆಲ್ಲರೂ ಹೆಚ್ಚಿನ ಮತಗಳನ್ನು ಬಿಜೆಪಿ ಗುರುತಿಗೆ ನೀಡುವ ಮೂಲಕ ಈ ಮೈತ್ರಿುಂನ್ನು ಗೆಲ್ಲಿಸಬೇಕು.ವಾತ್ರವಲ್ಲದೆ, ಸಣ್ಣಪುಟ್ಟ ವೈಮನಸ್ಸನ್ನು ತೊರೆದು ಅಭ್ಯರ್ಥಿ ಗೆಲುವಿಗೆ ಮತ ಹಾಕಿ ಚಾಮುಂಡೇಶ್ವರಿುಂಲ್ಲಿ ಅತಿಹೆಚ್ಚು ಮತ ನೀಡುವಂತೆ ಹೇಳಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago