ಪಿರಿಯಾಪಟ್ಟಣ: ಮುಂದೊಂದು ದಿನ ಪ್ರಪಂಚದ ಭೂಪಟದಲ್ಲಿ ಮೈಸೂರು ಕ್ಷೇತ್ರವನ್ನು ಅತ್ಯಂತ ಜನಪ್ರಿಯ ಪ್ರವಾಸಿ ತಾಣವನ್ನಾಗಿ ಮಾಡುವ ಗುರಿಯಿದೆ ಎಂದು ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು (ಮಾ.೧೬) ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮೈಸೂರಿನ ರಾಜಮನೆತನದ ಹೆಸರಿನಲ್ಲಿ ಮೈಸೂರನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಅನೇಕ ಯೋಜನೆಗಳು ನನ್ನ ಮುಂದಿದ್ದು ನಿಮ್ಮೆಲ್ಲರ ಸಹಕಾರವಿದ್ದರೆ ಮುಂದೊಂದು ದಿನ ಪ್ರಪಂಚದ ಭೂಪಟದಲ್ಲಿ ಮೈಸೂರು ಕ್ಷೇತ್ರವನ್ನು ಅತ್ಯಂತ ಜನಪ್ರಿಯ ಪ್ರವಾಸಿ ತಾಣವನ್ನಾಗಿ ಮಾಡುವುದಾಗಿ ಯದುವೀರ್ ಹೇಳಿದರು.
ನಾನು ರಾಜ ಮನೆತನದಿಂದ ಬಂದಿದ್ದರು ಸಹ ಜನಪ್ರತಿನಿಧಿಯಾಗಿ ಜನಸಾಮಾನ್ಯರ ಧ್ವನಿಯಾಗುವೆ, ಈ ಹಿಂದೆಯೂ ಸಹ ನಮ್ಮ ಮನೆತನದಿಂದ ರಾಜಕೀಯ ಪ್ರಕ್ರಿಯೆಗಳು ನಡೆದಿದ್ದು ಈ ಸಾರಿ ನಾನು ಸಹ ಲೋಕಸಭಾ ಅಭ್ಯರ್ಥಿಯಾಗಿ ಜನ ಸೇವೆಗೆ ಮುಂದಾಗಿದ್ದೇನೆ ಎಂದರು.
ನಾನು ಜನಪ್ರತಿನಿಧಿಯಾಗಿ ಮುಂದಿನ ಎಲ್ಲಾ ಸವಾಲುಗಳನ್ನು ಸ್ವೀಕರಿಸಿ ನಿಮ್ಮೆಲ್ಲರ ಸಹಕಾರದಿಂದ ಎದುರಿಸಲು ಸಿದ್ಧನಾಗಿದ್ದೇನೆ ಇದಕ್ಕೆ ನಿಮ್ಮೆಲ್ಲರ ಹಾಗೂ ಕಾರ್ಯಕರ್ತರ ಸಹಕಾರ ಅತ್ಯಗತ್ಯ ಎಂದರು.
ತಾಲೂಕು ಬಿಜೆಪಿ ಅಧ್ಯಕ್ಷ ರಾಜೇಂದ್ರ, ಕಾರ್ಯದರ್ಶಿ ಚೆನ್ನಬಸವರಾಜ್, ಮಾಜಿ ಶಾಸಕ ರಾಮದಾಸ್, ಸ್ಥಳೀಯ ಮುಖಂಡರುಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…