ಮೈಸೂರು: ಇದುವರೆಗೆ ನಾನೂ ರಾಜಕಾರಣ ಕಲಿತಿರಲಿಲ್ಲ, ಆದರೆ, ಇನ್ನು ಮುಂದೆ ಖಂಡಿತಾ ರಾಜಕಾರಣ ಕಲಿಯುತ್ತೇನೆ. ಅಭಿವೃದ್ಧಿ ಕೆಲಸದ ಬಲದಿಂದಲೇ ಜನರ ಪ್ರೀತಿ, ವಿಶ್ವಾಸ ಗಳಿಸಿದೆ. ಇದೇ ಕಾರಣಕ್ಕೆ ಜನರು ನನ್ನನ್ನು ಎರಡು ಬಾರಿ ಸಂಸದನನ್ನಾಗಿ ಆಯ್ಕೆ ಮಾಡಿದ್ದರು. ಇವುಗಳ ಮಧ್ಯೆ ರಾಜಕಾರಣ ಇರುತ್ತದೆ ಎಂಬುದನ್ನು ಅರಿತುಕೊಳ್ಳುವಲ್ಲಿ ನಾನು ಸೋತಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ರಾಜಕಾರಣಿಯಾಗಿ ನಾನು ಸೋತಿದ್ದೇನೆ ಆದರೆ ಸಂಸದನಾಗಿ ಸಕ್ಸಸ್ ಆಗಿದ್ದೇನೆ ಎಂದಿದ್ದಾರೆ. ರಾಜಕಾರಣಿಯಾದವರು ಕೇವಲ ಚುನಾವಣೆ ಟಿಕೆಟ್ಗೋಸ್ಕರ ಹೋರಾಟ ಮಾಡಬಾರದು, ಅಭಿವೃದ್ಧಿ ಕೆಲಸಕ್ಕೂ ಹೋರಾಟ ಮಾಡಬೇಕು. ರಾಜಕಾರಣ ಅರಿತುಕೊಳ್ಳುವಲ್ಲಿ ಸೋತಿದ್ದೇನೆ, ಆದರೆ ಮುಂದೆ ರಾಜಕಾರಣ ಕಲಿಯುತ್ತೇನೆ ಎಂದರು.
ಎರಡು ಸಂಸದರಾಗಿದ್ದ ಪ್ರತಾಪ್ ಸಿಂಹ ಅವರಿಗೆ ಈ ಬಾರಿಯ ಲೋಕಸಭೆ ಚುನಾವಣೆಯ ಟಿಕೆಟ್ ಕೈತಪ್ಪಿರುವ ಹಿನ್ನಲೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಣಕ್ಕಿಳಿದ್ದಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…