ಮೈಸೂರು : ನಿನ್ನೆ ( ಜುಲೈ 10 ) ಯೂತ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಮತ್ತು ಆಲ್ ಸ್ಟಾರ್ಸ್ ಬ್ಯಾಸ್ಕೆಟ್ ಬಾಲ್ ಆಶ್ರಯದಲ್ಲಿ ನಡೆದ ಕರಾಟೆ ಹಾಗೂ ಬ್ಯಾಸ್ಕೆಟ್ ಬಾಲ್ ಸ್ಪರ್ಧೆಯಲ್ಲಿ ನಗರದ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ವಿದ್ಯಾಸಂಸ್ಥೆಯ ಮಕ್ಕಳ ತಂಡಕ್ಕೆ ಪ್ರಥಮ ಬಹುಮಾನಗಳನ್ನು ಗಳಿಸಿದ್ದು ವಿಜೇತರಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವ್ಯವಸ್ಥಾಪಕರಾದ ಡಾ. ಭವಾನಿ ಶಂಕರ್ ರವರು ಶುಭ ಹಾರೈಸಿದರು.
ಬಳಿಕ ಮಾತನಾಡಿದ ಭವಾನಿ ಶಂಕರ್ , ವಿದ್ಯಾರ್ಥಿಗಳು ಕ್ರೀಡಾಸಕ್ತಿ ಕಡೆ ಹೆಚ್ಚಿನ ಗಮನ ಹರಿಸಿದಾಗ ಮಾನಸಿಕ ಹಾಗೂ ದೈಹಿಕ ಚೈತನ್ಯ ಹೆಚ್ಚಾಗುತ್ತದೆ. ಇದರಿಂದ ಅವರ ವ್ಯಾಸಂಗಕ್ಕೂ ಹೊಸ ಹೊರುಪು ಬರುತ್ತದೆ ಎಂದು ಅಭಿಪ್ರಾಯಪಟ್ಟರು.
ಶಿಕ್ಷಣ ಹಾಗೂ ಆರೋಗ್ಯವೇ ವಿದ್ಯಾರ್ಥಿಗಳ ಗೆಲುವಿನ ಮೆಟ್ಟಿಲು. ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನ ಬೆಳೆಸಿಕೊಂಡರೆ, ಜೀವನದ ಜಟಿಲ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಸಾಮಾರ್ಥ್ಯ ಹೆಚ್ಚುತ್ತದೆ ಎಂದರು
ಇದೇ ಸಂದರ್ಭದಲ್ಲಿ ಶಾಲೆಯ ಸಿಇಓ ತೇಜಸ್ ಶಂಕರ್, ಹಿರಿಯ ಪ್ರಾಚಾರ್ಯರಾದ ಗೋಪಾಲಸ್ವಾಮಿ ,ಪ್ರಾಚಾರ್ಯರಾದ ವಿಜಯ ನರಸಿಂಹಮ್ ಹಾಗೂ ಶಾಲೆಯ ಶಿಕ್ಷಕ ವೃಂದ ಹಾಜರಿದ್ದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…