ಮೈಸೂರು: ಸಿಎಂ ತವರು ಜಿಲ್ಲೆಯ ೧೮೩೦೮ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಇವರಲ್ಲಿ ೧೫೬೫೩ ಮಂದಿ ಉತ್ತೀರ್ಣರಾಗಿ ಶೇ.೮೫.೫ರಷ್ಟು ಶೇಕಡವಾರು ಫಲಿತಾಂಶ ಪಡೆಯುವ ಮೂಲಕ ಈ ಬಾರಿಯೂ ಹೆಣ್ಣು ಮಕ್ಕಳೆ ಜಿಲ್ಲೆಯಲ್ಲಿ ಮೇಲುಗೈ ಸಾಧಿಸಿದ್ದಾರೆ.
ಈ ಬಾರಿ ೧೫೫೬೮ ಬಾಲಕರು ಪರೀಕ್ಷೆ ಬರೆದಿದ್ದು, ಇವರಲ್ಲಿ ೧೧೧೮೮ ಮಂದಿ ಉತ್ತೀರ್ಣರಾಗಿ ಶೇ.೭೧.೮೭ರಷ್ಟು ಫಲಿತಾಂಶ ಪಡೆದಿದ್ದಾರೆ.
ಜಿಲ್ಲೆಯಲ್ಲಿ ೩೦, ೭೫೬ ವಿದ್ಯಾರ್ಥಿಗಳ ಪೈಕಿ ಹೊಸದಾಗಿ ೨೫, ೫೬೬ ವಿದ್ಯಾರ್ಥಿಗಳು, ೧೮೫೨ ಪುನರಾವರ್ತಿತ, ಖಾಸಗಿಯಾಗಿ ೧೨೬೮ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಟ್ಟು ೨೫, ೫೬೬ ಮಕ್ಕಳು ಉತ್ತೀರ್ಣರಾಗಿದ್ದಾರೆ.
೫೧೯೦ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ನಗರ ಭಾಗದಲ್ಲಿ ೨೬೮೮೫ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ ೨೨೫೭೯ ಮಂದಿ ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ೩೮೭೧ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇವರಲ್ಲಿ ೨೯೮೭ ಮಂದಿ ಉತ್ತೀರ್ಣರಾಗಿದ್ದಾರೆ.
ಜಿಲ್ಲೆಯಲ್ಲಿ ಈ ಬಾರಿಯೂ ದ್ವಿತೀಯ ಪಿಯು ಕಲಾ ವಿಷಯದಲ್ಲಿ ಕಡಿಮೆ ಫಲಿತಾಂಶ ಬಂದಿದೆ. ೬೫೫೦ ವಿದ್ಯಾರ್ಥಿಗಳು ಕಲಾ ವಿಷಯ ಪರೀಕ್ಷೆ ಬರೆದಿದ್ದು, ಇವರಲ್ಲಿ ಕೇವಲ ೪೫೬೩ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.೬೯.೬೬ರಷ್ಟು ಶೇಕಡವಾರು ಫಲಿತಾಂಶ ಬಂದಿದೆ.
ವಾಣಿಜ್ಯ ವಿಷಯದಲ್ಲಿ ಪರೀಕ್ಷೆ ಬರೆದಿದ್ದ ೧೦೩೪೧ ವಿದ್ಯಾರ್ಥಿಗಳಲ್ಲಿ ೮೭೦೬ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡವಾರು ೮೪.೧೯ರಷ್ಟು ಫಲಿತಾಂಶ ಬಂದಿದೆ.
ಜತೆಗೆ ವಿಜ್ಞಾನ ವಿಷಯದಲ್ಲಿ ೧೩೮೬೫ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ ೧೨೨೯೭ ಮಂದಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇಕಡವಾರು ೮೮.೬೯ರಷ್ಟು ಫಲಿತಾಂಶ ಲಭ್ಯವಾಗಿದೆ.
ನಗರ ಪ್ರದೇಶದಲ್ಲಿ ಶೇ.೮೩.೯೮ರಷ್ಟು ಫಲಿತಾಂಶ ಲಭವಾದರೆ, ಗ್ರಾಮೀಣ ಪ್ರದೇಶದಲ್ಲಿ ೭೭.೧೬ರಷ್ಟು ಫಲಿತಾಂಶ ಬಂದಿದೆ.
ಮೈಸೂರು ಜಿಲ್ಲೆ ಕಳೆದ ಬಾರಿಗಿಂತ ಉತ್ತಮ ಸಾಧನೆ ಮಾಡಿದೆ. ಶೇ.೭೯.೮೯ ರಿಂದ ಶೇ.೮೩.೧೩ಕ್ಕೆ ಏರಿಕೆಯಾಗಿದೆ. ರ್ಯಾಂಕಿಂಗ್ನಲ್ಲಿ ಮಾತ್ರ ೧೭ನೇ ಸ್ಥಾನ ಪಡೆದಿದೆ. ಮುಂದಿನ ಬಾರಿ ೧೦ರೊಳಗೆ ಸ್ಥಾನ ಪಡೆಯಲು ಪ್ರಯತ್ನಿಸಲಾಗುವುದು.
-ಮರಿಸ್ವಾಮಿ, ಡಿಡಿಪಿಯು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…