ಮೈಸೂರು

ಮೈಸೂರಿನಲ್ಲಿ ಮಹಿಳಾ ವಿದ್ಯಾರ್ಥಿಗಳದ್ದೇ ಮೇಲುಗೈ !

ಮೈಸೂರು: ಸಿಎಂ ತವರು ಜಿಲ್ಲೆಯ ೧೮೩೦೮ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಇವರಲ್ಲಿ ೧೫೬೫೩ ಮಂದಿ ಉತ್ತೀರ್ಣರಾಗಿ ಶೇ.೮೫.೫ರಷ್ಟು ಶೇಕಡವಾರು ಫಲಿತಾಂಶ ಪಡೆಯುವ ಮೂಲಕ ಈ ಬಾರಿಯೂ ಹೆಣ್ಣು ಮಕ್ಕಳೆ ಜಿಲ್ಲೆಯಲ್ಲಿ ಮೇಲುಗೈ ಸಾಧಿಸಿದ್ದಾರೆ.

ಈ ಬಾರಿ ೧೫೫೬೮ ಬಾಲಕರು ಪರೀಕ್ಷೆ ಬರೆದಿದ್ದು, ಇವರಲ್ಲಿ ೧೧೧೮೮ ಮಂದಿ ಉತ್ತೀರ್ಣರಾಗಿ ಶೇ.೭೧.೮೭ರಷ್ಟು ಫಲಿತಾಂಶ ಪಡೆದಿದ್ದಾರೆ.

ಜಿಲ್ಲೆಯಲ್ಲಿ ೩೦, ೭೫೬ ವಿದ್ಯಾರ್ಥಿಗಳ ಪೈಕಿ ಹೊಸದಾಗಿ ೨೫, ೫೬೬ ವಿದ್ಯಾರ್ಥಿಗಳು, ೧೮೫೨ ಪುನರಾವರ್ತಿತ, ಖಾಸಗಿಯಾಗಿ ೧೨೬೮ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಟ್ಟು ೨೫, ೫೬೬ ಮಕ್ಕಳು ಉತ್ತೀರ್ಣರಾಗಿದ್ದಾರೆ.

೫೧೯೦ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ನಗರ ಭಾಗದಲ್ಲಿ ೨೬೮೮೫ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ ೨೨೫೭೯ ಮಂದಿ ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ೩೮೭೧ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇವರಲ್ಲಿ ೨೯೮೭ ಮಂದಿ ಉತ್ತೀರ್ಣರಾಗಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿಯೂ ದ್ವಿತೀಯ ಪಿಯು ಕಲಾ ವಿಷಯದಲ್ಲಿ ಕಡಿಮೆ ಫಲಿತಾಂಶ ಬಂದಿದೆ. ೬೫೫೦ ವಿದ್ಯಾರ್ಥಿಗಳು ಕಲಾ ವಿಷಯ ಪರೀಕ್ಷೆ ಬರೆದಿದ್ದು, ಇವರಲ್ಲಿ ಕೇವಲ ೪೫೬೩ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.೬೯.೬೬ರಷ್ಟು ಶೇಕಡವಾರು ಫಲಿತಾಂಶ ಬಂದಿದೆ.

ವಾಣಿಜ್ಯ ವಿಷಯದಲ್ಲಿ ಪರೀಕ್ಷೆ ಬರೆದಿದ್ದ ೧೦೩೪೧ ವಿದ್ಯಾರ್ಥಿಗಳಲ್ಲಿ ೮೭೦೬ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡವಾರು ೮೪.೧೯ರಷ್ಟು ಫಲಿತಾಂಶ ಬಂದಿದೆ.

ಜತೆಗೆ ವಿಜ್ಞಾನ ವಿಷಯದಲ್ಲಿ ೧೩೮೬೫ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ ೧೨೨೯೭ ಮಂದಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇಕಡವಾರು ೮೮.೬೯ರಷ್ಟು ಫಲಿತಾಂಶ ಲಭ್ಯವಾಗಿದೆ.

ನಗರ ಪ್ರದೇಶದಲ್ಲಿ ಶೇ.೮೩.೯೮ರಷ್ಟು ಫಲಿತಾಂಶ ಲಭವಾದರೆ, ಗ್ರಾಮೀಣ ಪ್ರದೇಶದಲ್ಲಿ ೭೭.೧೬ರಷ್ಟು ಫಲಿತಾಂಶ ಬಂದಿದೆ.

 

ಮೈಸೂರು ಜಿಲ್ಲೆ ಕಳೆದ ಬಾರಿಗಿಂತ ಉತ್ತಮ ಸಾಧನೆ ಮಾಡಿದೆ. ಶೇ.೭೯.೮೯ ರಿಂದ ಶೇ.೮೩.೧೩ಕ್ಕೆ ಏರಿಕೆಯಾಗಿದೆ. ರ್ಯಾಂಕಿಂಗ್‌ನಲ್ಲಿ ಮಾತ್ರ ೧೭ನೇ ಸ್ಥಾನ ಪಡೆದಿದೆ. ಮುಂದಿನ ಬಾರಿ ೧೦ರೊಳಗೆ ಸ್ಥಾನ ಪಡೆಯಲು ಪ್ರಯತ್ನಿಸಲಾಗುವುದು.
-ಮರಿಸ್ವಾಮಿ, ಡಿಡಿಪಿಯು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

5 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

18 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

18 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

18 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

18 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

18 hours ago