ಮೈಸೂರು

ಮೈಸೂರಿನಲ್ಲಿ ಮಹಿಳಾ ವಿದ್ಯಾರ್ಥಿಗಳದ್ದೇ ಮೇಲುಗೈ !

ಮೈಸೂರು: ಸಿಎಂ ತವರು ಜಿಲ್ಲೆಯ ೧೮೩೦೮ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಇವರಲ್ಲಿ ೧೫೬೫೩ ಮಂದಿ ಉತ್ತೀರ್ಣರಾಗಿ ಶೇ.೮೫.೫ರಷ್ಟು ಶೇಕಡವಾರು ಫಲಿತಾಂಶ ಪಡೆಯುವ ಮೂಲಕ ಈ ಬಾರಿಯೂ ಹೆಣ್ಣು ಮಕ್ಕಳೆ ಜಿಲ್ಲೆಯಲ್ಲಿ ಮೇಲುಗೈ ಸಾಧಿಸಿದ್ದಾರೆ.

ಈ ಬಾರಿ ೧೫೫೬೮ ಬಾಲಕರು ಪರೀಕ್ಷೆ ಬರೆದಿದ್ದು, ಇವರಲ್ಲಿ ೧೧೧೮೮ ಮಂದಿ ಉತ್ತೀರ್ಣರಾಗಿ ಶೇ.೭೧.೮೭ರಷ್ಟು ಫಲಿತಾಂಶ ಪಡೆದಿದ್ದಾರೆ.

ಜಿಲ್ಲೆಯಲ್ಲಿ ೩೦, ೭೫೬ ವಿದ್ಯಾರ್ಥಿಗಳ ಪೈಕಿ ಹೊಸದಾಗಿ ೨೫, ೫೬೬ ವಿದ್ಯಾರ್ಥಿಗಳು, ೧೮೫೨ ಪುನರಾವರ್ತಿತ, ಖಾಸಗಿಯಾಗಿ ೧೨೬೮ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಟ್ಟು ೨೫, ೫೬೬ ಮಕ್ಕಳು ಉತ್ತೀರ್ಣರಾಗಿದ್ದಾರೆ.

೫೧೯೦ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ನಗರ ಭಾಗದಲ್ಲಿ ೨೬೮೮೫ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ ೨೨೫೭೯ ಮಂದಿ ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ೩೮೭೧ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇವರಲ್ಲಿ ೨೯೮೭ ಮಂದಿ ಉತ್ತೀರ್ಣರಾಗಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿಯೂ ದ್ವಿತೀಯ ಪಿಯು ಕಲಾ ವಿಷಯದಲ್ಲಿ ಕಡಿಮೆ ಫಲಿತಾಂಶ ಬಂದಿದೆ. ೬೫೫೦ ವಿದ್ಯಾರ್ಥಿಗಳು ಕಲಾ ವಿಷಯ ಪರೀಕ್ಷೆ ಬರೆದಿದ್ದು, ಇವರಲ್ಲಿ ಕೇವಲ ೪೫೬೩ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.೬೯.೬೬ರಷ್ಟು ಶೇಕಡವಾರು ಫಲಿತಾಂಶ ಬಂದಿದೆ.

ವಾಣಿಜ್ಯ ವಿಷಯದಲ್ಲಿ ಪರೀಕ್ಷೆ ಬರೆದಿದ್ದ ೧೦೩೪೧ ವಿದ್ಯಾರ್ಥಿಗಳಲ್ಲಿ ೮೭೦೬ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡವಾರು ೮೪.೧೯ರಷ್ಟು ಫಲಿತಾಂಶ ಬಂದಿದೆ.

ಜತೆಗೆ ವಿಜ್ಞಾನ ವಿಷಯದಲ್ಲಿ ೧೩೮೬೫ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ ೧೨೨೯೭ ಮಂದಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇಕಡವಾರು ೮೮.೬೯ರಷ್ಟು ಫಲಿತಾಂಶ ಲಭ್ಯವಾಗಿದೆ.

ನಗರ ಪ್ರದೇಶದಲ್ಲಿ ಶೇ.೮೩.೯೮ರಷ್ಟು ಫಲಿತಾಂಶ ಲಭವಾದರೆ, ಗ್ರಾಮೀಣ ಪ್ರದೇಶದಲ್ಲಿ ೭೭.೧೬ರಷ್ಟು ಫಲಿತಾಂಶ ಬಂದಿದೆ.

 

ಮೈಸೂರು ಜಿಲ್ಲೆ ಕಳೆದ ಬಾರಿಗಿಂತ ಉತ್ತಮ ಸಾಧನೆ ಮಾಡಿದೆ. ಶೇ.೭೯.೮೯ ರಿಂದ ಶೇ.೮೩.೧೩ಕ್ಕೆ ಏರಿಕೆಯಾಗಿದೆ. ರ್ಯಾಂಕಿಂಗ್‌ನಲ್ಲಿ ಮಾತ್ರ ೧೭ನೇ ಸ್ಥಾನ ಪಡೆದಿದೆ. ಮುಂದಿನ ಬಾರಿ ೧೦ರೊಳಗೆ ಸ್ಥಾನ ಪಡೆಯಲು ಪ್ರಯತ್ನಿಸಲಾಗುವುದು.
-ಮರಿಸ್ವಾಮಿ, ಡಿಡಿಪಿಯು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

8 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

12 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

13 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

13 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

18 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

18 hours ago