ಮೈಸೂರು

ಬೆಳ್ಳಂಬೆಳಿಗ್ಗೆ ಮೇಯರ್ ನಗರ ಪ್ರದಕ್ಷಿಣೆ: ಅಧಿಕಾರಿಗಳಿಗೆ ತರಾಟೆ

ಯುಜಿಡಿ ಸಂಪರ್ಕ ವ್ಯವಸ್ಥೆ ಮಾಡದ ಖಾಸಗಿ ಕಟ್ಟಡಕ್ಕೆ ನೀರು ಬಂದ್ ಮಾಡಲು ಸೂಚನೆ

ಮೈಸೂರು: ದಸರಾ ಮಹೋತ್ಸವ ಹತ್ತಿರವಾಗುತ್ತಿದ್ದಂತೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಾಗುವ ಕಾರಣ ನಗರದ ಹೃದಯ ಭಾಗ ಅಚ್ಚುಕಟ್ಟಾಗಿರುವಂತೆ ನೋಡಿಕೊಳ್ಳಲು ಮಹಾಪೌರ ಶಿವಕುಮಾರ್ ಬೆಳ್ಳಂಬೆಳಿಗ್ಗೆ ನಗರ ಪ್ರದಕ್ಷಿಣೆ ಮಾಡಿದರಲ್ಲದೆ, ಅವ್ಯವಸ್ಥೆಗಳನ್ನು ಕಣ್ಣಾರೆ ನೋಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.

ಹೃದಯ ಭಾಗದಲ್ಲಿ ಸ್ವಚ್ಛತೆ ಕಾಪಾಡದಿರುವುದು ಹಾಗೂ ಮ್ಯಾನ್‌ಹೋಲ್ ಮುಚ್ಚದಿರುವುದನ್ನು ಕಂಡು ಯುಜಿಡಿ, ಪರಿಸರ ಇಂಜಿನಿಯರ್‌ಗಳಿಗೆ ತರಾಟೆ ತಗೆದುಕೊಂಡರು.

ಫೈವ್‌ಲೈಟ್ ವೃತ್ತದಿಂದ ಮಂಗಳವಾರ ಬೆಳಿಗ್ಗೆ ನಗರದ ಪ್ರದಕ್ಷಿಣೆ ಆರಂಭಿಸಿದ ಮಹಾಪೌರರು, ವೃತ್ತದಲ್ಲಿ ಮ್ಯಾನ್‌ಹೋಲ್ ಒಡೆದು ರಸ್ತೆಯಲ್ಲಿ ನೀರು ಹರಿಯುತ್ತಿರುವುದನ್ನು ಕಂಡು ಸಿಡಿಮಿಡಿಗೊಂಡರು. ತಕ್ಷಣವೇ ಮ್ಯಾನ್‌ಹೋಲ್ ದುರಸ್ತಿಪಡಿಸಿ ಲೀಕ್ ಆಗುವುದನ್ನು ತಪ್ಪಿಸಬೇಕು ಎಂದು ಸೂಚಿಸಿದರು. ನಂತರ, ಬಿಷಪ್ ಹೌಸ್ ವೃತ್ತದಲ್ಲಿರುವ ಖಾಸಗಿ ಕಟ್ಟಡದ ಮಾಲೀಕರು ಜಾಗ ಬಿಟ್ಟುಕೊಡದ ಕಾರಣ ಜೋಡಿ ರಸ್ತೆ ನಿರ್ಮಾಣಕ್ಕೆ ಅಡ್ಡಿಯಾಗಿದೆ. ಇರ್ವೀನ್ ರಸ್ತೆಯಲ್ಲಿ ಪರಿಹಾರದ ಮೊತ್ತವನ್ನೇ ನಮಗೂ ಕೊಡುವಂತೆ ಕೇಳಿದ್ದು, ಈವಿಚಾರದಲ್ಲಿ ಹಲವಾರು ಬಾರಿ ಮಾತುಕತೆ ನಡೆಸಲಾಗಿದೆ. ಹೀಗಿದ್ದರೂ, ಜಾಗಬಿಡಲು ಒಪ್ಪಿಲ್ಲವೆಂದು ಹೇಳಿದಾಗ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು, ಕಾನೂನು ತಜ್ಞರ ಸಲಹೆ ಪಡೆದು ಸಮಸ್ಯೆ ಇತ್ಯರ್ಥಪಡಿಸಿ ಉಳಿದ ಕಾಮಗಾರಿ ಮುಗಿಸಲು ಕ್ರಮಕೈಗೊಳ್ಳಬೇಕು ಎಂದು ಹೇಳಿದರು. ಇದೇ ರಸ್ತೆಯಲ್ಲಿ ಯುಜಿಡಿ ಕಾಮಗಾರಿಗೆ ರಸ್ತೆಯನ್ನು ೫೦ ಮೀಟರ್‌ನಷ್ಟು ಅಗೆದಿದ್ದು, ಈ ವೇಳೆ ಬಸ್‌ಗಳ ಸಂಚಾರಕ್ಕೆ ತೊಂದರೆಯಾಗಿರುವುದನ್ನು ಗಮನಿಸಿದ್ದು, ದಸರಾ ತನಕ ಆರಂಭಿಸಿರುವ ಕಾಮಗಾರಿ ಪೂರ್ಣಗೊಳಿಸಿ,ಉಳಿದನ್ನು ನಂತರಕೈಗೆತ್ತಿಕೊಳ್ಳಬೇಕು. ಪೈಪ್ ಅಳವಡಿಸಿದ ಮೇಲೆ ಚೆನ್ನಾಗಿ ಮಣ್ಣು,ಜಲ್ಲಿಯಿಂದ ಮುಚ್ಚಬೇಕು.ಅದೇಮಣ್ಣನ್ನು ಹಾಕಿ ತುಂಬಿದರೆ ಒತ್ತಡ ತಾಳದೆ ಹೂತುಬಿಡುತ್ತದೆ ಎಂದರು.

-ರಸ್ತೆಯಲ್ಲಿ ಫುಟ್‌ಪಾತ್‌ಗಳು ಹಾಳಾಗಿರುವುದರಿಂದ ಓಡಾಡಲು ತುಂಬಾ ತೊಂದರೆಯಾಗಿದೆ. ಸಬರ್ಬ್‌ಬಸ್ ನಿಲ್ದಾಣದ ಅಕ್ಕಪಕ್ಕದ ರಸ್ತೆಗಳಲ್ಲಿ ಫುಟ್‌ಪಾತ್ ನಿರ್ಮಾಣ ಮಾಡಬೇಕು. ಯುಜಿಡಿ ಲೈನ್ ಹಾಳಾಗಿರುವುದರಿಂದ ರಿಪೇರಿಗೆ ಗಮನಹರಿಸಬೇಕು. -ಎಂ.ಸತೀಶ್, ನಗರಪಾಲಿಕೆ ಸದಸ್ಯರು

 

ದೇಶ-ವಿದೇಶಗಳಿಂದ ದಸರಾ ಮಹೋತ್ಸವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಕಾರಣ ಹೃದಯ ಭಾಗದ ರಸ್ತೆಗಳನ್ನು ಸ್ವಚ್ಛವಾಗಿಡಬೇಕಿದೆ. ಅಲ್ಲಲ್ಲಿ ಯುಜಿಡಿ ಸಮಸ್ಯೆ, ಸ್ವಚ್ಛತೆ ಸಮಸ್ಯೆಗಳು ಕಂಡುಬಂದಿದ್ದರಿಂದ ಎರಡು ದಿನಗಳಲ್ಲಿ ಸರಿಪಡಿಸಿ ಫೋಟೋ ಸಮೇತ ವರದಿ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಸ್ ನಿಲ್ದಾಣದ ರಸ್ತೆಯಲ್ಲಿ ಇರುವ ಅವ್ಯವಸ್ಥೆಗೆ ಶೀಘ್ರ ಮುಕ್ತಿ ಕೊಡಲಾಗುವುದು. -ಶಿವಕುಮಾರ್,ಮಹಾಪೌರರು

ಮೈಸೂರಿನ ಸಬರ್ಬ್ ಬಸ್ ನಿಲ್ದಾಣದ ರಸ್ತೆ, ಬಿಷಪ್ ಹೌಸ್ ರಸ್ತೆ, ಬಿ.ಎನ್.ರಸ್ತೆ,ಪುರಭವನ ಮೊದಲಾದ ಕಡೆಗಳಲ್ಲಿ ಮಂಗಳವಾರ ನಗರ ಪ್ರದಕ್ಷಿಣೆ ಹಾಕಿದ ಮಹಾಪೌರ ಶಿವಕುಮಾರ್ ಹಲವಾರು ಸಮಸ್ಯೆಗಳನ್ನು ವೀಕ್ಷಿಸಿದರು.ನಗರಪಾಲಿಕೆ ಸದಸ್ಯರಾದ ಎಂ.ಸತೀಶ್, ಎಂ.ಬಿ.ನಾಗರಾಜು,ಉಪ ಆಯುಕ್ತರಾದ ಎಂ.ಜೆ.ರೂಪಾ ಇನ್ನಿತರರು ಹಾಜರಿದ್ದರು

 

andolana

Recent Posts

ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆ

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…

6 mins ago

9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ…

9 mins ago

ಸಣ್ಣ ಮಠವನ್ನು ದೊಡ್ಡ ಮರವನ್ನಾಗಿ ಬೆಳೆಸಿದ್ದು ಬಾಲಗಂಗಾಧರನಾಥರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು…

16 mins ago

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

2 hours ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

3 hours ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

3 hours ago