ಮೈಸೂರು

ಒಳ ಮೀಸಲಾತಿ ಸಮೀಕ್ಷೆಯಲ್ಲಿ 9 ಲಕ್ಷ ಜನ ಜಾತಿ ನಮೂದಿಸಿಲ್ಲ : ಜ್ಞಾನ ಪ್ರಕಾಶ ಸ್ವಾಮೀಜಿ ಅಸಮಾಧಾನ

ಮೈಸೂರು : ಒಳ ಮೀಸಲಾತಿ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 9 ಲಕ್ಷ ಮಂದಿ ತಮ್ಮ ಜಾತಿಯನ್ನು ನಮೂದಿಸಿಲ್ಲ. ಇದರಿಂದ ಸಮುದಾಯದ ಆಸ್ತಿ ಬೇರೆಯವರ ಪಾಲಾಗಲಿದೆ ಎಂದು ಗಾಂಧಿನಗರದ ಶ್ರೀ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಅಶೋಕ ವೃತ್ತದಲ್ಲಿರುವ ವಿಶ್ವಮೈತ್ರಿ ಬುದ್ಧ ವಿಹಾರದಲ್ಲಿ ಆದಿ ಕರ್ನಾಟಕ ಮಹಾಸಂಸ್ಥಾನ ಗುರುಪೀಠದ ಡಾ.ಶ್ರೀ ಜ್ಞಾನ ಸ್ವರೂಪಾನಂದ ಸ್ವಾಮೀಜಿ ಅವರ ಪ್ರಥಮ ವರ್ಷದ ಸನ್ಯಾಸ ದೀಕ್ಷಾ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ನಡೆದ ಸಮಾಜದ ಏಳಿಗೆಗಾಗಿ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯ ಸುಮಾರು 9.60 ಲಕ್ಷ ಮಂದಿ ತಮ್ಮ ಜಾತಿಯನ್ನು ನಮೂದಿಸಿಲ್ಲ ಎಂದರೆ, ಯಾವ ಕಡೆಗೆ ಪರಿಶಿಷ್ಟ ಸಮುದಾಯ ಸಾಗುತ್ತಿದ್ದೆ ಎಂಬುದರ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ. ನಮ್ಮವರೇ ನಮ್ಮ ಸಮಾಜವನ್ನು ಸಮಾಽ ಮಾಡಲು ಹೋರಟಿದ್ದಾರೆಯೇ ಎಂದು ಪ್ರಶ್ನಿಸಿದರು.

ನಮ್ಮ ಸಮುದಾಯಕ್ಕೆ ಇಂದು ಗಂಭಿರವಾದ ಸಮಸ್ಯೆ ಎದುರಾಗಿದೆ. ಸರ್ಕಾರ ಈಗಾಗಲೇ ನಾಗಮೋಹನ ದಾಸ್ ವರದಿಯನ್ನು ಅಂಗೀಕರಿಸಿದೆ. ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ರಾಜ್ಯ ಸುತ್ತಿ ಸೆಮಿನಾರ್ ಮಾಡಿದರೂ ನಮ್ಮ ಜನ ಎಚ್ಚೆತ್ತುಕೊಳ್ಳಲಿಲ್ಲ ಎಂದರು.

ಬೆಂಗಳೂರು ನಗರದಲ್ಲೇ 7 ಲಕ್ಷ ಹಾಗೂ ಗ್ರಾಮೀಣ ಭಾಗದಲ್ಲಿ 2 ಲಕ್ಷ ಜನ ಜಾತಿ ನಮೂದಿಸಿಲ್ಲ. ಇದರಿಂದಾಗಿ ಸಮುದಾಯದ ಆಸ್ತಿ ಅನ್ಯ ಸಮುದಾಯದ ಪಾಲಾಗುವಲ್ಲಿ ಯಾವುದೇ ಸಂಶಯವಿಲ್ಲ. ಸಮಾಜದ ಹಿತವನ್ನು ಕಾಯಬೇಕಾದ ಮುಂಚೂಣಿ ನಾಯಕರು, ಸಮುದಾಯವನ್ನು ರಕ್ಷಿಸಬೇಕಾದವರು ಕೈ ಚೆಲ್ಲಿ ಕುಳಿತರೆ ಪರಿಸ್ಥಿತಿ ಯಾವ ಮಟ್ಟಕ್ಕೆ ಹೋಗುತ್ತದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು 1924 ರಲ್ಲಿ ಬಹಿಷ್ಕೃತ ಹಿತಕಾರಣಿ ಸಭೆಯಲ್ಲಿಯೇ ಶಿಕ್ಷಣ ಪಡೆದುಕೊಳ್ಳಬೇಕು, ಸಂಘಟಿತರಾಗಬೇಕು ಹಾಗೂ ಸಕ್ರಿಯವಾಗಿ ಹೋರಾಟ ಮಾಡಬೇಕೇಂದು ಕರೆ ನೀಡಿದ್ದರು. ಆದರೆ, ಎಲ್ಲಾ ಜಾತಿ-ಸಮುದಾಯಗಳು ಒಗ್ಗಟ್ಟಿನ ಮಂತ್ರ ಜಪಿಸುವಾಗ ನಾವುಗಳು ಯಾವ ಕಡೆಗೆ ಚಲಿಸುತ್ತಿದ್ದೇವೆ ಎಂಬುದರ ಬಗ್ಗೆ ಚಿಂತಿಸಬೇಕಿದೆ. ರಾಜಕೀಯ ಅಸ್ಪಷ್ಟತೆಯಿಂದ ಸಮುದಾಯದ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂದರು.

ನಾವೆಲ್ಲರೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫಲಾನುಭವಿಗಳು. ಬಾಬಾ ಸಾಹೇಬರು ಹೇಳಿರುವಂತಹ ಬುದ್ಧ ಧಮ್ಮ ಹಾಗೂ ಸಂಘಕ್ಕೆ ಶರಣಾಗಲಿಲ್ಲವೆಂದರೆ ನಾವು ಅವರಿಗೆ ಮಾಡಿದ ದ್ರೋಹವಾಗಲಿದೆ. ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಆದಿ ಕರ್ನಾಟಕ ಮಹಾಸಂಸ್ಥಾನ ಗುರುಪೀಠದ ಡಾ.ಶ್ರೀ ಜ್ಞಾನ ಸ್ವರೂಪಾನಂದ ಸ್ವಾಮೀಜಿ, ಮಾಜಿ ಮಹಾಪೌರ ಪುರುಷೋತ್ತಮ್, ಮುಖಂಡ ಮಹಾದೇವ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

10 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

10 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

10 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

10 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago